ನವಲಗುಂದ: ಇದೇ ತಿಂಗಳು 24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾಮಗಾರಿ ಉದ್ಘಾಟನೆ ನಿಮಿತ್ಯ ನಗರಕ್ಕೆ ಆಗಮಿಸುತಿದ್ದು, ಪಟ್ಟಣದ ತಾಲೂಕ ಪಂಚಾಯತಿಯ ಸಭಾಭವನದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ ಎಲ್ಲ ಇಲಾಖೆಯ ಆಡಳಿತ ಆಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಕಾರ್ಯಕ್ರಮದ ರೂಪು ರೇಷೆಗಳ ಬಗ್ಗೆ ಚರ್ಚೆ ಮಾಡಿ, ಇಲಾಖಾ ಅಧಿಕಾರಿಗಳು ತೆಗೆದುಕೊಳ್ಳ ಬೇಕಾದ ಜವಾಬ್ದಾರಿ ಮತ್ತು ಕಾರ್ಯಕ್ರಮ ಯಶಸ್ವಿ ಮಾಡಬೇಕು ಎಂದು ಹೇಳಿದರು. ಜೊತೆಗೆ ವಾಹನ ನಿಲುಗಡೆ ಬಗ್ಗೆ ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ತಾಲೂಕಾ ಉಸ್ತುವಾರಿ ಕಾರ್ಯದರ್ಶಿ ಶಿವಾನಂದ ಭಜಂತ್ರಿ, ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ್ ಹೊಳೆಪ್ಪಗೊಳ, ಸಿಪಿಐ ರವಿ ಕಪ್ಪತ್ತನವರ, ಪಿಎಸ್ಐ ಜನಾರ್ಧನ ಭಟ್ರಳ್ಳಿ ಸೇರಿದಂತೆ ಹುಬ್ಬಳ್ಳಿ, ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕಿನ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.