News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಕಾಂಗ್ರೆಸ್ ಪಾರ್ಟಿ ಅದನ್ನು ಖಂಡಿಸಿಲ್ಲ : ಪ್ರಲ್ಹಾದ್ ಜೋಶಿ

Congress party has not condemned Udhayanidhi Stalin's remarks: Pralhad Joshi
Photo Credit : News Kannada

ಹುಬ್ಬಳ್ಳಿ: ಸನಾತನ ಧರ್ಮದ ಅಚಾನಕ್ಕಾಗಿ ಕೊಟ್ಟ ಹೇಳಿಕೆ ಅಲ್ಲಾ. ಸನಾತನ ಧರ್ಮದ ವಿರುದ್ಧವಾಗಿಯೇ ಅಲ್ಲಿ ಕಾನ್ಫರೆನ್ಸ್ ಮಾಡಲಾಗಿತ್ತು.ಈವರೆಗೆ ಕಾಂಗ್ರೆಸ್ ಪಾರ್ಟಿ ಅದನ್ನು ಖಂಡಿಸಿಲ್ಲ. ಖರ್ಗೆಯವರ ಸುಪುತ್ರ ಪ್ರಿಯಾಂಕ್ ಸಮರ್ಥಿಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಅವಹೇಳನಕಾರಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಅಮೇರಿಕದಲ್ಲಿ ಹೋಗಿ ಮುಸ್ಲೀಮ್ ಲೀಗ್ ಸೆಕ್ಯುಲರ್ ಪಾರ್ಟಿ ಎಂದಿದ್ದರು. ಮುಸ್ಲೀಮ್ ಲೀಗ್‌ನಿಂದ ದೇಶ ವಿಭಜನೆಯಾಗಿದೆ, ನರಮೇಧವಾಗಿದೆ. ಘಮಂಡಿಯಾ ಘಟಬಂಧನ ಉಳಿಸಿಕೊಳ್ಳುವ ಆತುರದಲ್ಲಿ ಹೇಳಿಕೆಯನ್ನು ಖಂಡಿಸಿಲ್ಲ. ಸುತ್ತು ಬಳಸಿ ಎಲ್ಲಾ ಧರ್ಮ ನಂಬುತ್ತೇವೆ ಅಂತಾರೆ. ರಾಹುಲ್ ಗಾಂಧಿಯವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು. ಡಿ‌.ಕೆ‌. ಶಿವಕುಮಾರ್ ದೇವಸ್ಥಾನಕ್ಕೆ ಹೋಗ್ತಾರೆ ಅವರ ನಿಲುವೇನು..? ಡಿಎಮ್‌ಕೆ ಹೇಳಿಕೆ ಖಂಡಿಸಲು ನಿಮಗೆ ಶಕ್ತಿಯಿಲ್ಲ. ದೇಶದ ಸಂಸ್ಕೃತಿ, ನಂಬಿಕೆ, ಸಮಗ್ರತೆ ಏನಾದರೂ ಆಗಲಿ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ತುಷ್ಟೀಕರಣದ ರಾಜಕೀಯ ಔನತ್ಯ ತಲುಪಿದೆ. ಕಾಂಗ್ರೆಸ್ ಪಕ್ಷ ಇದರ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಬೇಕು‌ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು