News Karnataka Kannada
Monday, May 20 2024
ಹುಬ್ಬಳ್ಳಿ-ಧಾರವಾಡ

ದೇಶದ್ರೋಹಿ ಘೋಷಣೆ, ತಲ್ವಾರ್ ಹಿಡಿದು ಬೆದರಿಕೆ ಹಾಕೋರನ್ನ ಕಾಂಗ್ರೆಸ್ ರಕ್ಷಣೆ ಮಾಡಲು ಹೊರಟಿದ್ದಾರೆ

Congress trying to protect those who threaten with anti-national slogans, talwars: Joshi
Photo Credit : News Kannada

ಹುಬ್ಬಳ್ಳಿ: ಶಿವಮೊಗ್ಗ ಗಲಾಟೆ ವಿಚಾರ ರಾಜ್ಯ ಸರ್ಕಾರದ ತುಷ್ಠೀಕರಣ ರಾಜಕಾರಣದ ಪರಮಾವದಿ. ಶಿವಮೊಗ್ಗ ಗಲಾಟೆಯನ್ನ ರಾಜ್ಯ ಸರ್ಕಾರ ಇನ್ನೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ. ತುಷ್ಢೀಕರಣ ಕಾರಣದಿಂದ ಮತಾಂಧ ಶಕ್ತಿಗಳಿಗೆ ರಕ್ಷಣೆ ಇದೆ ಅನ್ನೋ ಮನೋಭಾವನೆ ಇದೆ. ಕಾಂಗ್ರೆಸ್ ಸರ್ಕಾರದಿಂದ ನಮಗೆ ರಕ್ಷಣೆ ಇದೆ ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ ಪಾಕಿಸ್ತಾನ್ ಜಿಂದಾಬಾದ್ ಅಂತ ಘೋಷಣೆ ಕೂಗುವವರನ್ನ ತಲ್ವಾರ್ ಹಿಡಿದು ಬೆದರಿಕೆ ಹಾಕೋರನ್ನ ರಕ್ಷಣೆ ಮಾಡಲು ಹೊರಟಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿ ಇಷ್ಟೊಂದು ರೀತಿಯ ದೊಡ್ಡ ಪ್ರಮಾಣದ ಗಲಾಟೆಯಾದ್ರೂ ಸಹ ಅದರ ಬಗ್ಗೆ ಉಡಾಫೆ ಉತ್ತರ ವ್ಯಕ್ತವಾಗುತ್ತಿವೆ.ಹಳೇ ಹುಬ್ಬಳ್ಳಿ ವಿಚಾರದಲ್ಲೂ ಪೊಲೀಸರು ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳದಿದ್ದರೆ ಪೊಲೀಸರು ಮತ್ತು ಜನರ ಹತ್ಯೆಯಾಗುತ್ತಿತ್ತು.ಹಳೇ ಹುಬ್ಬಳ್ಳಿ ಗಲಾಟೆ ವಿಚಾರದಲ್ಲೂ ಸಾಕಷ್ಟು ಗಲಭೆ ದೊಂಬಿ ನಡೆದಿದೆ. ಆದ್ರೆ ಇಂತಹ ಗಲಭೆ ನಡೆಸಿದವರ ಕೇಸ್ ವಾಪಸ್ ತೆಗೆದುಕೊಳ್ಳಲು ಸರ್ಕಾರ ಮುಂದಾಗುತ್ತಿದೆ. ತುಷ್ಠೀಕರಣದ ರಾಜಕಾರಣ ಪರಾಕಾಷ್ಠೆಯನ್ನ ಕಾಂಗ್ರೆಸ್ ತಲುಪಿದೆ. ಕಾಂಗ್ರೆಸ್ಸಿಗರು ಕೇವಲ ಅಲ್ಪಸಂಖ್ಯಾತರು ಮತ ಹಾಕಿಲ್ಲ ಅನ್ನೋದು ನೆನಪಿನಲ್ಲಿಟ್ಟುಕೊಳ್ಳಲಿ. ದೇಶದ್ರೋಹಿಗಳ, ಗಲಭೆಕೋರರ ಪರ ನಿಲ್ಲೋದನ್ನ‌ ನಾವು ತೀವ್ರವಾಗಿ ಖಂಡಿಸುತ್ತೇವೆ. ಪಾಕಿಸ್ತಾನಿ ಭಯೋತ್ಪಾದಕರ ಪರವಾಗಿ ನಿಲ್ಲೋಕೆ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಲ್ಲಿ ಲಿಂಗಾಯತ ಲಡಾಯಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರದಲ್ಲಿ ಜಾತಿ ಜಾತಿಗಳ ನಡುವೆ ಒಡೆದಾಳುವ ನೀತಿ ಇದೆ ಈ‌ ಬಗ್ಗೆ ಶಾಮನೂರು ಶಿವಶಂಕರಪ್ಪ‌ ಅವರೇ ಸ್ಪಷ್ಟಪಡಿಸಿದ್ದಾರೆ ನಾವೇನೂ ಜಾಸ್ತಿ ಹೇಳಲ್ಲ ಎಂದರು.‌

ಪಿಎಫ್ ಐ ಗೆ ಬೆಂಬಲ‌ ಸೂಚಿಸುವುದು ಕಾಂಗ್ರೆಸ್ ನ ಪಾಲಸಿ ಪಿಎಫ್ ಐ ಸೇರಿದಂತೆ ದೇಶದ್ರೋಹಿಗಳಿಗೆ ಪ್ರೋತ್ಸಾಹ ನೀಡುವಂತ ಪಕ್ಷವಾಗಿ ಕಾಂಗ್ರೆಸ್ ಪರಿವರ್ತನೆ ಹೊಂದುತ್ತಿದೆ ಎಂದರು.

ಧಾರವಾಡ ಜಿಲ್ಲೆಗೆ ಉಗ್ರರ ನಂಟು ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಗೃಹ ಇಲಾಖೆ ದೆಹಲಿ ಪೊಲೀಸರ ಜೊತೆ ಸಂಪರ್ಕ‌ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಬೇಕು. ಕಾಂಗ್ರೆಸ್ ಸರ್ಕಾರ ಈ ರೀತಿ ದೇಶದ್ರೋಹಿ ಕೆಲಸ ಮಾಡುವವರ ಪ್ರಕರಣ ಹಿಂತೆಗೆದುಕೊಂಡರೆ ಈ ರೀತಿ ಉಗ್ರರ ತಾಣವಾಗೋದು‌ ಸಹಜ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು