ಧಾರವಾಡ : ಕಲೆ, ಸಾಹಿತ್ಯ, ನಾಟಕ, ಚಿತ್ರಕಲೆ, ಲಲಿತಕಲೆ, ಸಂಗೀತದ ತವರೂರು ಧಾರವಾಡ ನಗರವನ್ನು ಕರ್ನಾಟಕದ ಸಾಂಸ್ಕøತಿಕ ರಾಜಧಾನಿ ಮಾಡಲು ಕೇಂದ್ರ ಸಂಸ್ಕøತಿ ಮಂತ್ರಾಲಯ ಸಂಪೂರ್ಣ ಸಹಕಾರ ಮತ್ತು ಅನುದಾನ ನೀಡಲು ಸಿದ್ಧವಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಸಂಸ್ಕøತಿ ಮಂತ್ರಾಲಯದ ರಾಜ್ಯ ಸಚಿವ ಅರ್ಜುನ ರಾಮ ಮೇಘವಾಲ ಹೇಳಿದರು.
ಅವರು ಇಂದು ಮಧ್ಯಾಹ್ನ ಧಾರವಾಡ ಕೋರ್ಟ್ ಸರ್ಕಲ್ ಹತ್ತಿರದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಲಲಿತ ಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ಸಮಾರಂಭ ಉದ್ಘಾಟಿಸಿ, ಮಾತನಾಡಿದರು.
ಕೇಂದ್ರ ಸಂಸ್ಕøತಿ ಮಂತ್ರಾಲಯದಡಿ ಬರುವ ವಿವಿಧ ಅಕಾಡೆಮಿ ಕಛೇರಿಗಳಲ್ಲಿ ಧಾರವಾಡದಲ್ಲಿ ಆರಂಭಿಸಲಾಗುತ್ತದೆ ಎಂದು ಅವರು ಹೇಳಿದರು.
ಸವಾಯಿ ಗಂಧರ್ವರ ಜನ್ಮಶತಮನೋತ್ಸವ ಆಚರಣೆಗೆ ಅಗತ್ಯ ಅನುದಾನ ನೀಡಲಾಗುವುದು. ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಾದೇಶಿಕ ಕಚೇರಿ, ಕೇಂದ್ರ ಸಾಂಸ್ಕøತಿಕ ಸಂಶೋಧನಾ ಕೇಂದ್ರದ ಕಛೇರಿ ಮತ್ತು ಕೇಂದ್ರ ನಾಟಕ ಅಕಾಡೆಮಿ ಕಛೇರಿಯನ್ನು ಧಾರವಾಡದಲ್ಲಿ ಸ್ಥಾಪಿಸಲು ಕ್ರಮವಹಿಸಲಾಗುವುದು ಎಂದು ಸಚಿವ ಅರ್ಜುನ ರಾಮ ಮೇಘವಾಲ ಅವರು ತಿಳಿಸಿದರು.
ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿವರ ಪ್ರಸ್ತಾವನೆಯಂತೆ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿ ಚುಕ್ಕಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಕುರಿತು ವಸ್ತು ಸಂಗ್ರಹಾಲಯ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿದರೆ 5 ಕೋಟಿ ರೂಪಾಯಿ ನೆರವು ನೀಡಲಾಗುವುದು ಮತ್ತು ವೀರರಾಣಿ ಕಿತ್ತೂರು ಚನ್ನಮ್ಮ ನಾಟಕವನ್ನು ಧಾರವಾಡ ಜಿಲ್ಲೆಯ ವಿವಿಧ ತಾಲೂಕ ಸ್ಥಳಗಳಲ್ಲಿ ಪ್ರದರ್ಶಿಸಲು ಸುಮಾರು 1.5 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.
ಧಾರವಾಡ ನಗರದಲ್ಲಿರುವ ರಮಾಬಾಯಿ ಡಾ.ಅಂಬೇಡ್ಕರ್ ವಸತಿ ನಿಲಯದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದಿಂದ ಆಗತ್ಯ ಅನುದಾನ ನೀಡುವ ಭರವಸೆ ನೀಡಿದ ಸಚಿವರು ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರು ಮಾತನಾಡಿ, ಧಾರವಾಡ ನಗರ ವಿವಿಧ ಕಲೆಗಳ ಬೀಡು, ಇಲ್ಲಿನ ದಿಗ್ಗಜರು ಕಲೆ, ಸಾಹಿತ್ಯ, ಚಿತ್ರಕಲೆ, ನಾಟಕ ಪರಂಪರೆಯನ್ನು ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಬೆಳೆಸಿ, ಹೆಸರು ಮಾಡಿದ್ದಾರೆ.
ಕೇಂದ್ರ ಲಲಿತ ಕಲಾ ಅಕಾಡೆಮಿ ಜೊತೆಗೆ ಸಂಸ್ಕøತಿ ಮಂತ್ರಾಲಯದಡಿ ಬರುವ ಕಲೆ, ಸಾಹಿತ್ಯ, ಸಂಗೀತ ಮತ್ತು ಸಂಸ್ಕøತಿ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಶಾಲೆಗಳನ್ನು ಧಾರವಾಡದಲ್ಲಿ ಆರಂಭಿಸಲು ವಿನಂತಿಸಿದರು.
ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕರ್ನಾಟಕ ರಾಜ್ಯ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ, ಮಹಾಪೌರ ಈರೇಶ ಅಂಚಟಗೇರಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ ಸಿ.ಇ.ಓ ಡಾ. ಸುರೇಶ ಇಟ್ನಾಳ, ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಲ ಕೃಷ್ಣ ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೇಂದ್ರ ಲಲಿತ ಕಲಾ ಅಕಾಡೆಮಿ ಅಧ್ಯಕ್ಷ ಉಮಾ ನಂದೂರಿ ಸ್ವಾಗತಿಸಿದರು. ಧಾರವಾಡ, ಪ್ರಾದೇಶಿಕ ಕಚೇರಿ ಸಮನ್ವಯಧಾಕಾರಿ ಶ್ರೀನಿವಾಸ ಶಾಸ್ತ್ರೀ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಕಾಶವಾಣಿ ಹಿರಿಯ ಉದ್ಘೋಷಕ ಮಾಯಾ ರಾಮನ ಕಾರ್ಯಕ್ರಮ ನಿರೂಪಿಸಿದರು. ಕೇಂದ್ರ ಲಲಿತ ಕಲಾ ಅಕಾಡೆಮಿ ಕಾರ್ಯದರ್ಶಿ ರಾಮಕೃಷ್ಣ ವೇದಾಲ ಅವರು ವಂದಿಸಿದರು.ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರು, ವಿವಿಧ ಸಂಘ, ಸಂಸ್ಥೆಗಳ ಮುಖ್ಯಸ್ಥರು, ಕಲಾಭಿಮಾನಿಗಳು, ಹಿರಿಯ ನಾಗರಿಕರು, ಸಾರ್ವಜನಿಕರು ಭಾಗವಹಿಸಿದ್ದರು.