News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ: ಜೋಶಿ‌ ಆರೋಪ

Joshi
Photo Credit : News Kannada

ಹುಬ್ಬಳ್ಳಿ: ಕೋವಿಡ್ ಸೇರಿದಂತೆ ಇತರ ಹಗರಣಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ನೇಮಿಸಿದರುವ ನ್ಯಾಯಾಧೀಶ ಕಾಂಗ್ರೆಸ್’ನವರೇ ಅಗಿದ್ದಾರೆ. ದಿನಂಪ್ರತಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವುದೇ ಕಾಯಕವಾಗಿದೆ. ಅಂತವರಿಂದ ತನಿಖೆ ಮಾಡಿಸುವ ಬದಲು ನೇರವಾಗಿ ಎಫ್ಐಆರ್ ಮಾಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ. ಯುಪಿಐ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ಆಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಈ ಕುರಿತ ಪಾರದರ್ಶಕ ತನಿಖೆಗೆ ನಮ್ಮ ಅಭ್ಯಂತರವಿಲ್ಲ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಯುಪಿಎ ಹೆಸರನ್ನು ಬದಲಾವಣೆ ಮಾಡಿದ್ದು, ಬ್ರ್ಯಾಂಡ್ ಕೆಟ್ಟು ಹೋದ ಸಂದರ್ಭದಲ್ಲಿ ಹೇಗೆ ಅಂಗಡಿ, ಫ್ಯಾಕ್ಟರಿ ಹೆಸರು ಬದಲಾವಣೆ ಮಾಡುತ್ತೇವೆ‌. ಹಾಗೇಯೇ ಕಾಂಗ್ರೆಸ್ ಯುಪಿಐ ಬದಲಾವಣೆ ಇಂಡಿಯಾ ಎಂದು ಬ್ರ್ಯಾಂಡ್ ಬದಲಾವಣೆ ಮಾಡಿದೆ. ಆದರೆ ಪ್ರಾಡಕ್ಟ್ ಮಾತ್ರ ಅದೇ ಇದೆ ಎಂದು ಗೇಲಿ ಮಾಡಿದರು.

ಚಂದ್ರಯಾನದ ಯಶಸ್ಸು ದೇಶದ ವಿಜ್ಞಾನಿ ಹಾಗೂ ಯುವಜನರ ಉತ್ಸಾಹವನ್ನು ಹೆಚ್ಚಿಸಿದೆ. ಸ್ವಾತಂತ್ರ್ಯ ಸಿಕ್ಕ 100 ವರ್ಷದೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು