ಧಾರವಾಡ: ಇಂದು ನಾಡಿನಾದ್ಯಂತ ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಅಮವಾಸ್ಯೆಗೆ ಅದರದ್ದೇ ಆದ ವೈಶಿಷ್ಟ್ಯವಿದೆ. ಈ ದಿನ ರೈತಾಪಿ ವರ್ಗ ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜೆ ಮಾಡುತ್ತಾರೆ.
ನಗರ ಪ್ರದೇಶಗಳಲ್ಲಿ ಮಣ್ಣಿನಿಂದ ಮಾಡಿದ ಎತ್ತುಗಳನ್ನು ತಂದು ಮಾರಾಟ ಮಾಡಲಾಗುತ್ತದೆ. ನಗರ ಪ್ರದೇಶದ ಜನ ಅದೇ ಮೂರ್ತಿಗಳನ್ನು ತೆಗೆದುಕೊಂಡು ಹೋಗಿ ಪೂಜೆ ಮಾಡುತ್ತಾರೆ. ಇಂದು ಧಾರವಾಡದ ಮಾರುಕಟ್ಟೆ ಜನರಿಂದ ತುಂಬಿ ತುಳುಕುತ್ತಿತ್ತು. ಮಣ್ಣಿನ ಎತ್ತುಗಳಿಗೆ ಭಾರಿ ಬೇಡಿಕೆ ಬಂದಿತ್ತು. ಎಲ್ಲರೂ ಎತ್ತುಗಳ ಮೂರ್ತಿಗಳ ತೆಗೆದುಕೊಂಡು ಹೋಗುವ ದೃಶ್ಯಗಳು ಕಂಡು ಬಂದವು.