ಧಾರವಾಡ: ಐಐಟಿ ಉದ್ಘಾಟನೆಗೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
ಇಂದು ಮಧ್ಯಾಹ್ನ ನರೇಂದ್ರ ಮೋದಿ ಅವರು ಐಐಟಿಗೆ ಆಗಮಿಸಲಿದ್ದು, ಅದಕ್ಕಾಗಿ ಧಾರವಾಡ ಸೇರಿದಂತೆ ಗ್ರಾಮಾಂತರ ಭಾಗದ ಜನರಿಗಾಗಿ ಉಚಿತ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ಬಸ್ಗಳ ಮೂಲಕ ಲಕ್ಷಾಂತರ ಜನ ಈ ಕಾರ್ಯಕ್ರಮಕ್ಕೆ ಬರಲಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.