ಧಾರವಾಡ: ಕಾಂಗ್ರೆಸ್ ಮುಳುಗುತ್ತಿರೋ ಹಡಗು- ಮಾಜಿ ಸಿಎಂ ಯಡಿಯೂರಪ್ಪ

ಧಾರವಾಡ: ಕಾಂಗ್ರೆಸ್ ಮುಳುಗುತ್ತಿರೋ ಹಡಗು ಇದ್ದಂತೆ.  ಜಗತ್ತಿನ ವಿಶ್ವನಾಯಕರ ಪೈಕಿ ಶ್ರೇಷ್ಠ ಸ್ಥಾನ ಗಳಿಸಿರುವ ಪ್ರಧಾನಿ ಮೋದಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಮಾನರಾಗಲು ಸಾಧ್ಯವೇ ಇಲ್ಲ ಎಂದು ಮಾಜಿ‌ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಬಿಜೆಪಿ ಅಭ್ಯರ್ಥಿ ಅಮೃತ್ ದೇಸಾಯಿ ಪರ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು,ತುಪ್ಪರಿ ಹಳ್ಳ ಮಳೆ ಬಂದಾಗ ಸಾಕಷ್ಟು ಅನಾಹುತ ಆಗುತ್ತಿತ್ತು.312 ಕೋಟಿ ನೀಡಿ ಅದಕ್ಕೆ ಪರಿಹಾರ ಕಂಡುಕೊಂಡಿದ್ದೇವೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ಎಲ್ಲಿದೆ. ಎಲ್ಲಾ ರಾಜ್ಯದಲ್ಲಿ ನೀವು ಸೋತಿದ್ದಾರೆ. ಚುನಾವಣೆ ನಂತರ ಕಾಂಗ್ರೆಸ್ ದಿವಾಳಿಯಾಗಲಿದೆ. ರೈತರಿಗೆ ಉಚಿತ ವಿದ್ಯುತ್ ನೀಡಿದ್ದು ನಾವು. ರೈತರಿಗಾಗಿ ಪ್ರತ್ಯೇಕ ಬಜೆಟ್ ಮಂಡನೆ ಮಾಡಿದ್ದೇನೆ. ಪ್ರಧಾನಿ ಮೋದಿ ಬಗ್ಗೆ ಅಲ್ಲೊಬ್ಬ ಇಲ್ಲೊಬ್ಬ ಹಗುರವಾಗಿ ಮಾತನಾಡುತ್ತಾರೆ. ಖರ್ಗೆಯವರು ಮೋದಿಜಿ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ರಾಷ್ಟ್ರೀಯ ಅಧ್ಯಕ್ಷ ಈ ರೀತಿ ಕೆಳಮಟ್ಟದ ಮಾತು ಹೇಳಿದ್ದಾರೆ.

ಕಾಂಗ್ರೆಸ್ ನವರು ಹಗುರವಾಗಿ ಮಾತನಾಡುತ್ತಿದ್ದಾರೆ.ಕಾಂಗ್ರೆಸ್ ಗೆ ಅಡ್ರೆಸ್ ಇಲ್ಲದ ಹಾಗೆ ಓಡಿಸಬೇಕು. ಕೌನ್ಟಿಂಗ್ ಏಜೆಂಟ ಗಳು ಅಲ್ಲಿಂದಲೇ ಓಡಬೇಕು ಹಾಗೆ ಮತ ಹಾಕಿ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ. 130ರಿಂದ140 ಸೀಟ್ ಗಳನ್ನ ಗೆದ್ದು ಸರ್ಕಾರ ರಚನೆ ಮಾಡ್ತೀವಿ. ನನಗೆ 80 ವರ್ಷ, ಆದ್ರೆ ನಾನು ಮನೆಯಲ್ಲಿ ಕುಳಿತಿಲ್ಲ. ಸರ್ಕಾರ ಬರುವ ಹಾಗೆ ಕೆಲಸ ಮಾಡ್ತೀನಿ. ಕಾಂಗ್ರೆಸ್ ಹಣ ಬಲ ತೋಳು ಬಲ, ಹೆಂಡದ ಬಲ ತೋರಿಸಿ ಜನರನ್ನ ಮೋಸ ಮಾಡಿದ್ದರು. ಆದ್ರೆ ಇನ್ನು ಮುಂದೆ ಆಗಲ್ಲ. ಅಮೃತ್ ದೇಸಾಯಿ ಗೆಲ್ಲಿಸಿ ಮತ್ತೊಮ್ಮೆ ನಾನು ಇಲ್ಲಿಗೆ ಬರ್ತೀನಿ ಎಂದರು. 25ಸಾವಿರಕ್ಕೂ ಅಧಿಕ ಮತಗಳಿಂದ ಅಮೃತ್‌ ಗೆಲ್ಲುತ್ತಾರೆ ಎಂದರು.

Gayathri SG

Recent Posts

ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ 60 ವರ್ಷದ ಅಜ್ಜಿ

ಸೌಂದರ್ಯ ಸ್ಪರ್ಧೆಗಳಲ್ಲಿ ವಿಜೇತರಾಗಲು 16 ರಿಂದ 28 ವರ್ಷ ವಯಸ್ಸಿನವರ ಅಗತ್ಯವಿಲ್ಲ ಎಂದು 60 ವರ್ಷದ ಮಹಿಳೆಯೊಬ್ಬರು ಸಾಬೀತುಪಡಿಸಿದ್ದಾರೆ.

13 mins ago

ಐಪಿಎಲ್ 2024: ಇಂದು ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಮುಖಾಮುಖಿ

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

17 mins ago

ತೋಟದಲ್ಲಿ ಹಾವು ಕಚ್ಚಿ 7 ವರ್ಷದ ಬಾಲಕಿ ಮೃತ್ಯು

ಹಾವು ಕಚ್ಚಿ 7 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ‌ಕೋಳೂರು ಗ್ರಾಮದಲ್ಲಿ ಘಟನೆ ನಡೆದಿದೆ.

22 mins ago

ಕೇಂದ್ರದಿಂದ ಬರ ಪರಿಹಾರ: ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಎಂದ ಕೃಷ್ಣ ಬೈರೇಗೌಡ

ನಾವು 18,000 ಕೋಟಿಗೆ ಮನವಿ ಸಲ್ಲಿಸಿದ್ದೆವು.. ಈಗ 3,400 ಕೋಟಿಯಷ್ಟು ಹಣ ಕೊಟ್ಟಿದ್ದಾರೆ. ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ…

38 mins ago

ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ: ಸ್ಟ್ರಾಂಗ್ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ಉಡುಪಿಯ ಸೈಂಟ್ ಸಿಸಿಲೀಸ್‌ನಲ್ಲಿರುವ ಸ್ಟ್ರಾಂಗ್ ರೂಮ್ ನಲ್ಲಿ ಕ್ಷೇತ್ರದ ಹತ್ತು ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ.

56 mins ago

ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಬಂದು ನಂಜುಂಡೇಶ್ವರನ ದರ್ಶನ ಪಡೆದ ನಟ ದುನಿಯಾ ವಿಜಯ್

ಬೆಂಗಳೂರಿನಿಂದ ನಂಜನಗೂಡಿಗೆ ಕಾಲ್ನಡಿಗೆಯಲ್ಲಿ ಹೊರಟು ನಂಜುಂಡೇಶ್ವರ ದೇವರ ದರ್ಶನವನ್ನು ನಟ ದುನಿಯಾ ವಿಜಯ್ ಪಡೆದಿದ್ದಾರೆ.

1 hour ago