ಧಾರವಾಡ: ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಕ ಚಿಂಚೋರೆ ಅವರು ತಮ್ಮ ಕುಟುಂಬ ಸಮೇತರಾಗಿ ಮತದಾನ ಮಾಡಿದ್ದಾರೆ.
ಧಾರವಾಡದ ಕರ್ನಾಟಕ ಹೈಸ್ಕೂಲ್ ಗೆ ತಮ್ಮ ಪತ್ನಿ ಸಂಗೀತಾ ಅವರೊಂದಿಗೆ ಬಂದ ದೀಪಕ ಚಿಂಚೋರೆ, ಮತದಾನ ಮಾಡಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ವಾತಾವರಣ ಚೆನ್ನಾಗಿದೆ. ಎಲ್ಲರೂ ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತ ಚಲಾವಣೆ ಮಾಡಬೇಕು. ನಾವು ಕುಟುಂಬ ಸಮೇತರಾಗಿ ಮತದಾನ ಮಾಡಿದ್ದೇವೆ. ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ ಅವರು ನಿನ್ನೆ ರಾತ್ರಿ ಹಣ ಹಂಚುವ ಕೆಲಸ ಮಾಡಿದರು. ನಿನ್ನೆ ರಾತ್ರಿಯಿಡಿ ಹಣ ಹಂಚಿದ್ದಾರೆ. ಹಣ ಇದೆ ಎಂದು ಬೆಲ್ಲದ ಈ ರೀತಿಯ ರಾಜಕಾರಣ ಮಾಡಬಾರದು. ಪ್ರಜ್ಞಾವಂತ ನಾಗರಿಕರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಒಟ್ಟಾರೆ ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಚುರುಕು ಪಡೆದುಕೊಂಡಿದ್ದು, ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗೆ ಬಂದು ಮತ ಹಾಕುತ್ತಿದ್ದಾರೆ.