News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ದೀಪಕ್ ಚಿಂಚೋರೆ ಉಮೇದುವಾರಿಕೆ ಸಲ್ಲಿಕೆ

Dharwad: Deepak Chinchore's candidature submission
Photo Credit : News Kannada

ಧಾರವಾಡ: ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಕ್ ಚಿಂಚೋರೆ ಅವರು ಇಂದು ಅಧಿಕೃತವಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಧಾರವಾಡದ ಕೆಸಿಡಿ ವೃತ್ತದ ಬಳಿ ಇರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಚಿಂಚೋರೆ, ಅಲ್ಲಿಂದ ತೆರೆದ ವಾಹನದ ಮೂಲಕ ಅದ್ಧೂರಿ ಮೆರವಣಿಗೆ ಮಾಡುವ ಮೂಲಕ ಧಾರವಾಡದ ಪಾಲಿಕೆ ಕಚೇರಿಗೆ ಬಂದು ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಗಣಪತಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡದವರು ಪಾಲ್ಗೊಂಡಿದರು. ಸಾವಿರಾರು ಜನ ಮೆರವಣಿಗೆಯಲ್ಲಿ ಪಾಲ್ಗೊಂಡು ದೀಪಕ್ ಚಿಂಚೋರೆ ಅವರಿಗೆ ಜಯಘೋಷ ಮೊಳಗಿಸಿದರು. ದೀಪಕ್ ಚಿಂಚೋರೆ ಅವರ ಸ್ಪರ್ಧೆಯಿಂದ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರ ತೀವ್ರ ರಂಗು ಪಡೆದುಕೊಂಡಿದೆ. ತೆರೆದ ವಾಹನದ ಮೂಲಕ ನಡೆದ ಮೆರವಣಿಗೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಆರ್.ಕೆ.ಪಾಟೀಲ, ಹೇಮಂತ ಗುರ್ಲಹೊಸೂರ ಅವರು ಚಿಂಚೋರೆ ಅವರಿಗೆ ಸಾಥ್ ನೀಡಿದರು. ಒಟ್ಟಾರೆ ಚಿಂಚೋರೆ ಕೂಡ ಶಕ್ತಿ ಪ್ರದರ್ಶನದೊಂದಿಗೆ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು