News Karnataka Kannada
Tuesday, April 30 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಮಾಜಿ ಸಿಎಂಗೆ ಕ್ಷೇತ್ರ ಸಿಗಲಾರದಂತಹ ಪರಿಸ್ಥಿತಿ ನಿರ್ಮಾಣ – ಪ್ರಹ್ಲಾದ ಜೋಶಿ ವ್ಯಂಗ್ಯ

Former CM may not get a seat, says Pralhad Joshi
Photo Credit : News Kannada

ಧಾರವಾಡ: ಮಾಜಿ ಸಿಎಂ ಸಿದ್ದರಾಮಯ್ಯನವರು ಈಗ ಕೋಲಾರ ಕ್ಷೇತ್ರ ಬಿಟ್ಟು ವರುಣಾದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಅವರಿಗೆ ಕ್ಷೇತ್ರವೇ ಸಿಗಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು.

ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೇ ಕ್ಷೇತ್ರ ಸಿಗಲಾರದಂತಹ ಸ್ಥಿತಿ ನಿರ್ಮಾಣವಾಗಿರುವಾಗ ಜನರು ಆ ಪಕ್ಷದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಸಿ.ಟಿ.ರವಿ ಅವರು ಲಿಂಗಾಯತರ ಬಗ್ಗೆ ಹೇಳಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರವಿ ಅವರು ಲಿಂಗಾಯತರ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ವೀಡಿಯೋ ಬೋಗಸ್ ಇದೆ. ಈಗಾಗಲೇ ಅದರ ಬಗ್ಗೆ ಫ್ಯಾಕ್ಟ್ ಚೆಕ್ ಆಗಿದೆ. ಕಾಂಗ್ರೆಸ್‌ನವರು ಇಂತಹ ಸುಳ್ಳು ವೀಡಿಯೋ ಬಿಟ್ಟು ಜನರನ್ನು ಮರುಳು ಮಾಡಲು ಹೊರಟಿದ್ದಾರೆ.

ಅನೇಕ ಮಾಧ್ಯಮಗಳಲ್ಲಿ ಅದು ಫೇಕ್ ಎಂದು ಬಂದಿದೆ. ಅದರ ಬಗ್ಗೆ ಚರ್ಚೆ ಅನಗತ್ಯ. ಏಕೆಂದರೆ ಸಿ.ಟಿ.ರವಿ ಪ್ರಬುದ್ಧ ರಾಜಕಾರಣಿ. ಅವರು ನಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅವರು ಈ ರೀತಿ ಹೇಳಲು ಸಾಧ್ಯವೇ ಇಲ್ಲ. ನಮಗೆ ಎಲ್ಲ ಸಮುದಾಯದ ಬಗ್ಗೆ ಗೌರವ ಇದೆ. ವಿಶೇಷವಾಗಿ ಲಿಂಗಾಯತರು ಹಾಗೂ ಬಸವಣ್ಣನವರ ಬಗ್ಗೆ ಗೌರವವಿದೆ ಎಂದರು.

ಶಾಸಕ ಅರವಿಂದ ಬೆಲ್ಲದ ಅವರು ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲ್ಲದ ಅವರ ಮೇಲೆ ಇಂತಹ
ಊಹಾಪೋಹಗಳು ಮೊದಲಿನಿಂದಲೂ ಇವೆ. ಅವರು ಬೆಳಿಗ್ಗೆ ನನ್ನ ಜೊತೆ ಮಾತನಾಡಿದ್ದಾರೆ. ಅದೆಲ್ಲವೂ ಸಂಪೂರ್ಣ ಸುಳ್ಳು. ಅವರು ಯಾರನ್ನೂ ಭೇಟಿಯಾಗಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು