ಧಾರವಾಡ: ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬಿಜೆಪಿಯಿಂತ ದೂರ ಉಳಿದಿದ್ದ ಮಾಜಿ ಶಾಸಕಿ ಸೀಮಾ ಮಸೂತಿ ಅವರ ಮನವೊಲಿಸುವಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಯಶಸ್ವಿಯಾಗಿದ್ದಾರೆ.
ಸೀಮಾ ಮಸೂತಿ ಅವರ ಮನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಸೀಮಾ ಮಸೂತಿ ಅವರ ಆರೋಗ್ಯ ವಿಚಾರಿಸಿದರು. ಆನಂತರ ಅವರ ಮನವೊಲಿಸಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಅವರ ಗೆಲುವಿಗೆ ಶ್ರಮಿಸುವಂತೆ ಮನವೊಲಿಸಿದರು.
ಸಚಿವರಿಗೆ ಸಮ್ಮತಿ ಸೂಚಿಸಿದ ಸೀಮಾ ಮಸೂತಿ, ಈಗಾಗಲೇ ಅಮೃತ ದೇಸಾಯಿ ಪರ ಪ್ರಚಾರ ಮಾಡಲು ಅಖಾಡಕ್ಕಿಳಿದಿದ್ದಾರೆ. ಹನುಮನಹಾಳ ಹಾಗೂ ಉಪ್ಪಿನ ಬೆಟಗೇರಿಯಲ್ಲಿ ಸೀಮಾ ಮಸೂತಿ ಅಮೃತ ದೇಸಾಯಿ ಪರ ಪ್ರಚಾರ ಆರಂಭಿಸಿದ್ದಾರೆ. ಸೀಮಾ ಮಸೂತಿ ಅವರ ಮನೆಗೆ ಕೇಂದ್ರ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಬಸವರಾಜ ಕೊರವರ, ಗುರುನಾಥಗೌಡ ಗೌಡರ, ಮೇಯರ್ ಈರೇಶ ಅಂಚಟಗೇರಿ, ನಿತಿನ್ ಇಂಡಿ, ಶಂಕರ ಮುಗದ ಸೇರಿದಂತೆ ಅನೇಕರು ಇದ್ದರು.
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…