News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಧಾರವಾಡ ಕುವರನ ’ಚಿನ್ನ’ದ ಸಾಧನೆ

Dharwad Kuvara's 'gold' achievement: Villagers welcome him
Photo Credit : News Kannada

ಹುಬ್ಬಳ್ಳಿ : ಜರ್ಮನಿಯ ಬರ್ಲಿನ್‌ನಲ್ಲಿ ಜುಲೈ 28ರಿಂದ ಆಗಸ್ಟ್ 5ರವರೆಗೆ ನಡೆದ 8ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಭಾರತ ತಂಡ 20 ಚಿನ್ನದ ಪದಕಗಳೊಂದಿಗೆ ಅಭೂತಪೂರ್ವ ಸಾಧನೆ ಮಾಡಿ ಸ್ವದೇಶಕ್ಕೆ ಮರಳಿದೆ.

ಅಲ್ಲದೇ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪದ ದೇವಪ್ಪ ಮೋರೆ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಂಡಿದ್ದು ಸ್ವಗ್ರಾಮಕ್ಕೆ ಆಗಮಿಸಿದ ಅವರನ್ನು ಗ್ರಾಮಸ್ಥರು ಹೆಗಲ ಮೆಲೆ ಹೊತ್ತೊಯ್ದು ಸ್ವಾಗತಿಸಿದರಲ್ಲದೇ ಭಾರತದ ತ್ರಿವರ್ಣ ಧ್ವಜವನ್ನು ಜರ್ಮನಿಯ ನೆಲದಲ್ಲಿ ಹಾರಿಸಿದ ತಮ್ಮೂರಿನ ಸಾಧಕನ ಸಾಧನೆಗೆ ಸಂಭ್ರಮಿಸಿದರು.

ಭಾರತ ಕುಬ್ಜರ ತಂಡದ ತರಬೇತುದಾರರು ಹಾಗೂ ಮ್ಯಾನೇಜರ್ ಆಗಿದ್ದ ಹುಬ್ಬಳ್ಳಿಯ ಶಿವಾನಂದ ಗುಂಜಾಳ ಅವರನ್ನು ಹೃತ್ಪೂರ್ವಕವಾಗಿ ಬರಮಾಡಿಕೊಂಡರುದೇಶ ಪ್ರತಿನಿಧಿಸುತ್ತಿದ್ದರೂ ಭಾರತ ಸರ್ಕಾರದಿಂದ ಯಾವುದೇ ಅನುದಾನವೂ ಬಂದಿಲ್ಲವಾದ್ದರಿಂದ ಹಲವು ದಾನಿಗಳ ನೆರವಿನಿಂದ ದೇವಪ್ಪ ಇತ್ತೀಚೆಗೆ ಜರ್ಮನಿಯ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.

ಭಾರತ ತಂಡ 20 ಬಂಗಾರ ಅಲ್ಲದೇ 12 ಬೆಳ್ಳಿ,ಹಾಗೂ 10 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ. 19 ಜನರ ಭಾರತ ತಂಡದಲ್ಲಿ ದೇವಪ್ಪ ಮೋರೆ ಸಹಿತ 8 ಜನರು ಕನ್ನಡಿಗರೇ ಇದ್ದರು. ರಾಜ್ಯದ ತುಳಸೀದರ 75 ಕೆ.ಜಿ.ಪವರ್ ಲಿಪ್ಟಿಂಗ್ ವಿಭಾಗದಲ್ಲಿ ಬಂಗಾರ ಗೆದ್ದರೆ,ನಾಗೇಶ ಸಹ ಬೆಳ್ಳಿ ಗೆದ್ದಿದ್ದರು. ವಿದೇಶಿ ನೆಲದಲ್ಲಿ ಅಪೂರ್ವ ಸಾಧನೆ ಮಾಡಿರುವ ಕುಬ್ಜ ಕ್ರೀಡಾಪಟುಗಳನ್ನು ಸರ್ಕಾರ ಮತ್ತು ಜಿಲ್ಲಾ ಆಡಳಿತ ಸನ್ಮಾನಿಸಿ ಗೌರವಿಸಬೇಕಾಗಿದೆ. ಅಲ್ಲದೇ ನೆರವಿನ ಹಸ್ತ ನೀಡಬೇಕಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು