ಧಾರವಾಡ: ವಿದ್ಯುತ್ ದರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ವಾಣಿಜ್ಯೋದ್ಯಮ ಸಂಘದ ಸದಸ್ಯರು ರಾಜ್ಯ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು, ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರವನ್ನು ದುಪ್ಪಟ್ಟು ಏರಿಕೆ ಮಾಡಿರುವುದು ಸರಿಯಲ್ಲ, ವಿದ್ಯುಚ್ಛಕ್ತಿ ದರಗಳ ಏರಿಕೆಯ ಕೆಲವು ವಿಷಯಗಳಲ್ಲಿ ಅಸ್ಪಷ್ಟತೆ, ಗೊಂದಲಗಳಿವೆ ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ವಿದ್ಯುಚ್ಛಕ್ತಿ ದರಗಳ ಏರಿಕೆಯನ್ನು ತಡೆಹಿಡಿದು ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿದರು.
ಇಂದು ವಿದ್ಯುತ್ ಅಗತ್ಯತೆಗಳಲ್ಲಿ ಒಂದಾಗಿದ್ದು ಈ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ವಿದ್ಯುಚ್ಛಕ್ತಿ ದರಗಳ ಪರಿಷ್ಕರಣೆ ಮಾಡಿ ವಾಣಿಜ್ಯೋದ್ಯಮ ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.