News Karnataka Kannada
Tuesday, April 30 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಬೇಕಾಬಿಟ್ಟಿ ನೀರಿನ ಬಿಲ್ ವಿತರಣೆ, ಡಿಸಿ ಕಚೇರಿ ಎದುರು ಪ್ರತಿಭಟನೆ

Protest in front of DC's office over distribution of water bills
Photo Credit : News Kannada

ಧಾರವಾಡ: ಇಲ್ಲಿಯ ಜನ್ನತನಗರ ನಿವಾಸಿಗಳಿಗೆ ಎಲ್ ಆ್ಯಂಡ್ ಟಿ ಕಂಪೆನಿಯಿಂದ ಬೇಕಾಬಿಟ್ಟಿ ನೀರಿನ ಬಿಲ್ ವಿತರಿಸುತ್ತಿರುವುದನ್ನು ಖಂಡಿಸಿ ಸಮಗ್ರ ಪ್ರಜೆಗಳ ಧ್ವನಿ ಸಮಿತಿ ವತಿಯಿಂದ ಧಾರವಾಡ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಜನ್ನತನಗರ ಕೊಳಚೆ ಪ್ರದೇಶವಾಗಿದ್ದು, ಮೂಲ ಸೌಕರ್ಯ ವಂಚಿತವಾಗಿದೆ. ಈ ಮಧ್ಯೆ ಎಲ್ ಆ್ಯಂಡ್ ಟಿ ಕಂಪೆನಿಯಿಂದ ನೀರು ಸರಬರಾಜು ಆದಾಗಿನಿಂದ ಬೇಕಾಬಿಟ್ಟಿ ನೀರಿನ ಬಿಲ್ ವಿತರಣೆ ಮಾಡಲಾಗುತ್ತಿದೆ. ಕಡು ಬಡವರೇ ವಾಸಿಸುತ್ತಿರುವ ಈ ಪ್ರದೇಶದ ಕೆಲವರಿಗೆ 60 ಸಾವಿರ, 80 ಸಾವಿರದವರೆಗೆ ನೀರಿನ ಬಿಲ್ ನೀಡಲಾಗಿದೆ.ಇದು ಜನಪ್ರತಿನಿಧಿಗಳ ಮತ್ತು ಎಲ್ ಆ್ಯಂಡ್ ಟಿ ಕಂಪೆನಿ ಅಧಿಕಾರಿಗಳ ನಿರ್ಲಕ್ಷ ಧೋರಣೆಗೆ ಸಾಕ್ಷಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೊಳಚೆ ಪ್ರದೇಶದ ನಿವಾಸಿಗಳಿಗೆ ಸರ್ಕಾರದ ಆಶ್ರಯ ಯೋಜನೆಯಡಿ ಮನೆಗಳು ಹಂಚಿಕೆಯಾಗಿಲ್ಲ. ಸರಿಯಾದ ರೀತಿಯಲ್ಲಿ ಸಮೀಕ್ಷೆ ಮಾಡದೇ ಕಡು ಬಡವರಿಗೆ ಅನ್ಯಾಯ ಎಸಗಲಾಗಿದೆ. ಇಲ್ಲಿನ ಬಹುತೇಕ ಜನರು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಆಶ್ರಯ ಮನೆಗಳು ಮರೀಚಿಕೆಯಾಗಿವೆ. ಸರ್ಕಾರದಿಂದ ನಿರ್ಮಿಸಲಾದ ಹಾಗೂ ಇತರೆ ಆಶ್ರಯ ಯೋಜನೆಗಳ ವಸತಿಗಳು ಕಳಪೆ ಗುಣಮಟ್ಟದ್ದಾಗಿವೆ. ಇವುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಬೇಕು. ಕೊಳಚೆ ಪ್ರದೇಶ ಎಂದು ಪರಿಗಣಿಸಿ ತೆರಿಗೆಯನ್ನು ಕಡಿಮೆ ಮಾಡಬೇಕು. ಕೊಳಚೆ ಪ್ರದೇಶದಲ್ಲಿ ನಿರ್ಮಾಣವಾದ ಮನೆಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು