ಧಾರವಾಡ: ಸರ್ಕಾರಗಳು ಜಾರಿಗೊಳಿಸುವ ಜನಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ವಿವಿಧ ಅನುದಾನಗಳ ಜೊತೆಗೆ ವಿವಿಧ ಸರ್ಕಾರಿ ಇಲಾಖೆಗಳು ಸಂಗ್ರಹಿಸುವ ತೆರೆಗೆ, ಸ್ಟ್ಯಾಂಪ್ ಡ್ಯೂಟಿ ಹಣ ಮುಖ್ಯವಾಗಿರುತ್ತದೆ ಎಂದು ಶಾಸಕ ಅರವಿಂದ ಬೆಲ್ಲದ ಅವರು ಹೇಳಿದರು.
ಅವರು ಇಂದು ಮಧ್ಯಾಹ್ನ ಲಕಮನಹಳ್ಳಿ ಪ್ರದೇಶದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನೂತನ ಕಛೇರಿ ಕಟ್ಟಡ ಖನಿಜ ಭವನ ಉದ್ಘಾಟಿಸಿ, ಮಾತನಾಡಿದರು.
ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮ ಅನುಷ್ಠಾನಗೊಳಿಸಲು ಸರ್ಕಾರ ಅನುದಾನ ನೀಡುತ್ತದೆ, ಸರ್ಕಾರಕ್ಕೆ ಜಿ.ಎಸ್.ಟಿ. ಅಬಕಾರಿ ಇಲಾಖೆ, ಮೋಟಾರ್ ವಾಹನ ಇಲಾಖೆ, ಸ್ಟ್ಯಾಂಪ್ ಡ್ಯೂಟಿ, ಗಣಿ ಇಲಾಖೆ, ಕೈಗಾರಿಕೆ ಇಲಾಖೆ ಅಂತಹ ಪ್ರಮುಖ ಇಲಾಖೆಗಳಿಂದ ಆದಾಯ ಬರುತ್ತದೆ ಎಂದು ಶಾಸಕರು ತಿಳಿಸಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಸರ್ಕಾರದ ಮುಖ್ಯ ಇಲಾಖೆ ಆಗಿದ್ದು, ಜಿಲ್ಲೆ ಮತ್ತು ರಾಜ್ಯದ ಅಭಿವೃದ್ಧಿಗೆ, ಕಾಮಗಾರಿಗಳಿಗೆ ಅನುದಾನ ಸಂಗ್ರಹಿಸುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ಅಧ್ಯಕ್ಷ ರಾಜೇಶ್ ಕೋಟೆನ್ನವರ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೆ.ಚಂದ್ರಶೇಖರ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಧಾರವಾಡ ವಿಭಾಗದ ಕೆ.ಆರ್.ಐ.ಡಿ.ಎಲ್. ಕಾರ್ಯಪಾಲಕ ಅಭಿಯಂತರರಾದ ಸುಜಾತ ಎಸ್.ಕಾಳೆ ಅವರು ವಂದಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.