ಧಾರವಾಡ: ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ನಿಮಿತ್ತ ಎಪ್ರಿಲ್ 15 ರಿಂದ 18ರವರೆಗೆ ಧಾರವಾಡ ನಗರದಲ್ಲಿ ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಹಾನಗರ ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋಗುವ ವಾಹನಗಳು- ಜುಬ್ಲಿ ಸರ್ಕಲ್, ಸಿಎಸ್ಐ ಕಾಲೇಜ್ ರೋಡ, ಲೈನ್ ಬಜಾರ ಮುಖಾಂತರ ಎನ್.ಟಿ.ಟಿ.ಎಫ್ ಕ್ರಾಸ್ ಮುಖಾಂತರ ಹುಬ್ಬಳ್ಳಿ ಕಡೆಗೆ ಹೋಗಬೇಕು.
ಸವದತ್ತಿ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು- ಡಿಪೊ ಸರ್ಕಲ್, ಗೊಲ್ಲರ ಓಣಿ ಕ್ರಾಸ್, ಕಮಲಾಪೂರ ಉಸುಕಿನ ಅಡ್ಡಾ, ಮರಾಠಾ ಕಾಲೊನಿ ರೋಡ್ ಮುಖಾಂತರ ಹೋಗಬೇಕು.
ನವಲಗುಂದ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು- ಚರಂತಿಮಠ ಗಾರ್ಡನ್ ಕ್ರಾಸ್, ಕಾಮನಕಟ್ಟಿ ಕೂಟ, ಹೊಸಯಲ್ಲಾಪುರ ಸರ್ಕಲ್, ಸುಣ್ಣದ ಬಟ್ಟಿ ರೋಡ್ ಮೂಲಕ ಎಲ್.ಎಮ್.ವಿ ವಾಹನಗಳು ಮತ್ತು ಹೆಬ್ಬಳ್ಳಿ ಅಗಸಿ, ಡಿಪೊ ಸರ್ಕಲ್, ಗೊಲ್ಲರ ಓಣಿ, ಮರಾಠಾ ಕಾಲೊನಿ ರೋಡ್ ಮೂಲಕ ಬಸ್ಸುಗಳು ಹೋಗಬೇಕು.
ಹಳಿಯಾಳ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು- ದಾಸನಕೊಪ್ಪ ಸರ್ಕಲ್, ಜರ್ಮನ್ ಸರ್ಕಲ್, ಉಪನಗರ ಪಿ.ಎಸ್ ಮೂಲಕ ಹೋಗಬೇಕು.
ಗೋವಾ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು- ಜರ್ಮನ್ ಸರ್ಕಲ್, ಹಳೇ ಎಸ್.ಪಿ.ಆಫೀಸ್ ಕ್ರಾಸ್, ನಾಯಕ ಅಡ್ಡಾ ಕ್ರಾಸ್, ಹಳೇ ಬಸ್ ನಿಲ್ದಾಣ ಮೂಲಕ ಹೋಗಬೇಕು. ಹುಬ್ಬಳ್ಳಿ ಮತ್ತು ಕಲಘಟಗಿ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು- ಕೋರ್ಟ್ ಸರ್ಕಲ್, ಕಾಸ್ಮಸ್ ಕ್ಲಬ್ ರೋಡ್, ಲೈನ ಬಜಾರ, ಸಿಎಸ್ಐ ಕಾಲೇಜ್ ರೋಡ್ ಮತ್ತು ಬಾಗಲಕೋಟ ಪೆಟ್ರೋಲ್ ಪಂಪ್, ಮಹಿಷಿ ರೋಡ, ಎಮ್ಮಿಕೇರಿ ಕ್ರಾಸ್, ಹೆಡ್ ಪೋಸ್ಟ ಆಫೀಸ್, ಕೋರ್ಟ ಸರ್ಕಲ್ ಮೂಲಕ ಸಂಚರಿಸಬೇಕೆಂದು ಮಹಾನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.