ಧಾರವಾಡ: ಜಿಲ್ಲೆಯ ಲೋಕಸಭಾ ಕ್ಷೇತ್ರದ ಟಿಕೆಟ್ನ್ನು ಈ ಬಾರಿ ಪ್ರಹ್ಲಾದ ಜೋಶಿ ಬಿಟ್ಟು ಹೊಸಬರಿಗೆ ನೀಡಬೇಕು ಎಂಬ ಒತ್ತಾಯವನ್ನು ವೀರಶೈವ ಲಿಂಗಾಯತ ಸಮಾಜ ಮಾಡಿದೆ.
ಈ ಕುರಿತು ವೀರಶೈವ ಲಿಂಗಾಯತ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ಅದನ್ನು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಟ್ಯಾಗ್ ಮಾಡಲಾಗಿದೆ.
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಹೊಸ ಮುಖದ ಅವಶ್ಯಕತೆ ಇದೆ. ಪ್ರಹ್ಲಾದ ಜೋಶಿ 2004 ರಿಂದ 2023ರ ವರೆಗೆ ಆಳಿದ್ದಾರೆ. ಆದ್ದರಿಂದ ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸಬರಿಗೆ ಟಿಕೆಟ್ ನೀಡಬೇಕು ಎಂದು ವೀರಶೈವ ಲಿಂಗಾಯತ ಸಮಾಜ ಬಿಜೆಪಿಗೆ ಒತ್ತಾಯ ಮಾಡಿದೆ.