News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ವಿನಯ್‌ ಕುಲಕರ್ಣಿ ರಾಜಕೀಯ ಜೀವನ ಮುಗಿಸುವ ಸಂಚು ಯಶಸ್ವಿಯಾಗದು, ನಿಕೇತ್‌ರಾಜ್‌

Vinay Kulkarni's conspiracy to end his political career will not succeed, says Niket Raj
Photo Credit : News Kannada

ಧಾರವಾಡ: ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು ರಾಜಕೀಯವಾಗಿ ಮುಗಿಸಬೇಕು ಎಂದು ಸಾಕಷ್ಟು ಪ್ರಯತ್ನ ನಡೆಯಿತು. ಆದರೆ ಅವರು ರಾಜಕೀಯವಾಗಿ ಮತ್ತೆ ಪುಟಿದೇಳುತ್ತಾರೆ ಎಂದು ಕಾಂಗ್ರೆಸ್‌ ವಕ್ತಾರ ನಿಕೇತ್‌ ರಾಜ್‌ ಮೌರ್ಯ ಹೇಳಿದರು. ಧಾರವಾಡ ತಾಲೂಕು ಗರಗ ಗ್ರಾಮದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿನಯಕ ಕುಲಕರ್ಣಿ ಅವರ ಪರ ಮತಯಾಚನೆ ಸಭೆಯಲ್ಲಿ ಮಾತನಾಡಿದರು.

ಚುನಾವಣೆ ಬಂದಾಗ ಬಿಜೆಪಿಯವರು ಹಣದ ಹೊಳೆ ಹರಿಸುತ್ತಾರೆ. ಪ್ರತಿ ವರ್ಷ ನಮಗೇ ಗೊತ್ತಿಲ್ಲದೆ ನಮ್ಮ ಜೇಬಿನಿಂದ ಒಂದೂವರೆ ಲಕ್ಷ ರೂ. ಟ್ಯಾಕ್ಸ್‌ ವಸೂಲಿ ಮಾಡುತ್ತಾರೆ. ಇದೇ ಹಣ ನಮಗೆ ಕೊಟ್ಟು ಚುನಾವಣೆ ಮಾಡುತ್ತಾರೆ. ಈ ಬಾರಿ ಚುನಾವಣೆಯಲ್ಲಿ ಮತಕೇಳಲು ಬಂದಾಗ ಜನ ಇದನ್ನು ಪ್ರಶ್ನೆ ಮಾಡಬೇಕು. ವಿನಯ್‌ ಈ ಭಾಗದ ದೊಡ್ಡ ನಾಯಕರು. ಅವರನ್ನು ಹತ್ತಿಕ್ಕುವ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದರು.

ವಿನಯ್‌ ಪತ್ನಿ ಶಿವಲೀಲಾಕುಲಕರ್ಣಿ ಮಾತನಾಡಿ ವಿನಯ್‌ ಕುಲಕರ್ಣಿ ಬಗ್ಗೆ ಹೊರಗಿನವರು ಏನು ಹೇಳಬೇಕಿಲ್ಲ. ಈ ಭಾಗದ ಜನರಿಗೆ ಉದ್ಯೋಗ ನೀಡಬೇಕೆಂಬ ಉದ್ದೇಶದಿಂದ ಮಾರ್ಕೋಪೊಲೋದಂತಹ ಕಂಪನಿ ತಂದು ಯುವಕರಿಗೆ ಉದ್ಯೋಗ ನೀಡುವ ಕಾರ್ಯ ಮಾಡಿದ್ದಾರೆ. ಈ ನಿಟ್ಟಿನ್ಲಲಿ ಈ ಭಾರಿ ಅವರನ್ನು ಬೆಂಬಲಿಸಿದ್ದೇ ಆದಲ್ಲಿ ಯುವಕರಿಗೆ ಉಜ್ವಲ ಭವಿಷ್ಯವಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು