ಧಾರವಾಡ: ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿ ಟಿಕೆಟ್ ಕೊನೆಗೂ ಹಾಲಿ ಶಾಸಕ ಅಮೃತ ದೇಸಾಯಿ ಅವರ ಪಾಲಾಗಿದೆ.
ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ದಂಡೇ ಹುಟ್ಟಿಕೊಂಡಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಕೊನೆಗೆ ಹಾಲಿ ಶಾಸಕ ಅಮೃತ ದೇಸಾಯಿ ಅವರನ್ನೇ ಕಣಕ್ಕಿಳಿಸುವ ಮೂಲಕ ಎಲ್ಲಾ ಗುಮಾನಿಗಳಿಗೆ ತೆರೆ ಎಳೆದಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಹಾಲಿ ಬಿಜೆಪಿ ಶಾಸಕ ಅಮೃತ ದೇಸಾಯಿ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಮುಖಾಮುಖಿಯಾಗಲಿದ್ದು, ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ ತೀವ್ರ ರಂಗು ಪಡೆದುಕೊಳ್ಳಲಿದೆ.