ಧಾರವಾಡ: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಎಸ್.ಡಿ.ಎಮ್ ಇಂಜಿನಿಯರಿಂಗ್ ಕಾಲೇಜ್ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಸಮಾರಂಭವನ್ನು ಜೂನ್ 5, 2023 ರಂದು ಎಸ್.ಡಿ.ಎಮ್ ಇಂಜಿನೀಯರಿಂಗ್ ಕಾಲೇಜಿನ ಅಡಿಟೋರಿಯಮ್ ಹಾಲ್ನಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಕಾರ್ಯಕ್ರಮ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಎಸ್.ಡಿ.ಎಮ್ ಇಂಜಿನೀಯರಿಂಗ್ ಸೊಸೈಟಿಯ ಕಾರ್ಯದರ್ಶಿ ಜೀವಂಧರ್ಕುಮಾರ ಅವರು ವಹಿಸಿಕೊಳ್ಳುವರು. ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲೋಕೇಶ ಬಿ. ಜಗಲಾಸರ, ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಸೋನಲ್ ವೃಷ್ಟಿ, ಕ.ರಾ.ಮಾ.ನಿ.ಮಂ. ಹಿರಿಯ ಪರಿಸರ ಅಧಿಕಾರಿ ಸಯ್ಯದ್ ಖಾಜಾ ಮೊಹಿದ್ದೀನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್. ಎಸ್. ಕೆಳದಿಮಠ, ಕ.ರಾ.ಮಾ.ನಿ.ಮಂ. ಪರಿಸರ ಅಧಿಕಾರಿ ಐ.ಎಚ್.ಜಗದೀಶ, ಎಸ್.ಡಿ.ಎಮ್ ಇಂಜಿನೀಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಕೆ. ಗೋಪಿನಾಥ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.