News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಚುನಾವಣಾ ಕಾರ್ಯಕ್ಕೆ ನಿಯೋಜಿತರು ನಿಯಮಾನುಸಾರ ಕರ್ತವ್ಯ ನಿರ್ವಹಿಸಬೇಕು ‌: ದಿವ್ಯ ಪ್ರಭು

ಲೋಕಸಭೆ ಸಾರ್ವತ್ರಿಕ ಚುನಾವಾಣೆ 2024ಕ್ಕೆ ಸಂಭಂದಿಸಿದಂತೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಈಗಾಗಲೇ ಚುನಾವಣಾ ಕರ್ತವ್ಯ ನಿರ್ವಹಣೆಗೆ ನೋಡಲ್ ಅಧಿಕಾರಿ, ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ನಿಯೋಜಿಸಿ, ಆದೇಶಿಸಲಾಗಿದೆ.
Photo Credit : News Kannada

ಧಾರವಾಡ: ಲೋಕಸಭೆ ಸಾರ್ವತ್ರಿಕ ಚುನಾವಾಣೆ 2024ಕ್ಕೆ ಸಂಭಂದಿಸಿದಂತೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಈಗಾಗಲೇ ಚುನಾವಣಾ ಕರ್ತವ್ಯ ನಿರ್ವಹಣೆಗೆ ನೋಡಲ್ ಅಧಿಕಾರಿ, ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ನಿಯೋಜಿಸಿ, ಆದೇಶಿಸಲಾಗಿದೆ.

ಯಾವುದೇ ಅಧಿಕಾರಿ, ಸಿಬ್ಬಂದಿಗಳು ಜಿಲ್ಲಾ ಚುನಾವಣಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ರಜೆ ಅಥವಾ ಗೈರು ಹಾಜರಾಗಬಾರದು. ಅನುಮತಿ ಪಡೆಯದೆ ಗೈರಾದಲ್ಲಿ ಗಂಭೀರವಾಗಿ ಪರಿಗಣಿಸಿ, ಅಂತವರನ್ನು ಜಿಲ್ಲೆಯಿಂದ ಬಿಡುಗಡೆ ಮಾಡಿ, ಮಾನ್ಯ ಭಾರತ ಚುನಾವಣಾ ಆಯೋಗಕ್ಕೆ ಶಿಸ್ತು ಕ್ರಮಕೈಗೊಳ್ಳಲು ಶಿಪ್ಪಾರಸ್ಸು ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಕಾರ್ಯಗಳಿಗೆ ನೂತನವಾಗಿ ನಿಯೋಜಿತರಾಗಿರುವ ನೋಡಲ್ ಅಧಿಕಾರಿಗಳ, ಚುನಾವಣಾ ಅಧಿಕಾರಿ, ಸಿಬ್ಬಂದಿಗಳ ಸಭೆ ಜರುಗಿಸಿ ಮಾತನಾಡಿದರು.

ಲೋಕಸಭೆಯ ಧಾರವಾಡ ಮತಕ್ಷೇತ್ರದ ಚುನಾವಣೆಯನ್ನು ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ, ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಚುನಾವಣಾ ಸಂಬಂಧಿತ ಎಲ್ಲ ಕಾರ್ಯಗಳು ಸುಗಮವಾಗಿ, ಕಾಲಮಿತಿಯಲ್ಲಿ ನಡೆಸಲು ವಿವಿಧ ವಿಭಾಗಗಳಿಗೆ ಜಿಲ್ಲೆಯ 21 ಜನ ಹಿರಿಯ ಅಧಿಕಾರಿಗಳನ್ನು ನೊಡಲ್ ಅಧಿಕಾರಿಗಳನ್ನಾಗಿ ನೇಮಿಸಿ, ಆದೇಶಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದರು.

ನೊಡಲ್ ಅಧಿಕಾರಿಗೆ ತನ್ನ ಅಧೀನದಲ್ಲಿ ಕರ್ತವ್ಯ ನಿರ್ವಹಿಸಲು ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅವರ ತಂಡದ ಸದಸ್ಯರನ್ನಾಗಿ ನೇಮಿಸಿದೆ. ಪ್ರತಿ ನೊಡಲ್ ಅಧಿಕಾರಿ ತನ್ನ ವಿಭಾಗದ ಕಾರ್ಯ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ ನೀಡಿ, ತನ್ನ ತಂಡವನ್ನು ಸುಸಜ್ಜಿತಗೊಳಿಸುವುದು ಅವರ ಕರ್ತವ್ಯವಾಗಿದೆ. ಪ್ರತಿಯೊಬ್ಬ ಅಧಿಕಾರಿ ತನಗೆ ನಿಯೋಜಿಸಿದ ಚುನಾವಣಾ ಕಾರ್ಯಗಳ ಬಗ್ಗೆ, ಅದಕ್ಕೆ ಅನ್ವಯಿಸುವ ಸೆಕ್ಷನ್, ಕಾನೂನು, ಐಪಿಸಿ ತಿಳಿದಿರಬೇಕು. ತನ್ನ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಅರ್ಥೈಸಿಕೊಂಡು ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಎಫ್‍ಎಸ್‍ಟಿ, ಎಸ್‍ಎಸ್‍ಟಿ ಹಾಗೂ ಇತರ ತಂಡಗಳ ಮಧ್ಯ ಪರಸ್ಪರ ಸಮನ್ವಯ, ಸಂವಹನ ಇರಬೇಕು. ಚುನಾವಣಾ ಕಾರ್ಯಗಳನ್ನು ಗಂಭೀರವಾಗಿ ಪರಿಗಣಿಸಿ, ಮಾಡಬೇಕು. ಕಣ್‍ತಪ್ಪಿನಿಂದಲೂ ಸಹ ಯಾವುದೇ ಚುನಾವಣಾ ಕರ್ತವ್ಯ ಲೋಕಪವಾಗಬಾರದು. ಜಿಲ್ಲಾ ಚುನಾವಣಾ ಆಯೋಗಕ್ಕೆ ಸಾರ್ವಜನಿಕರು, ರಾಜಕೀಯ ಪಕ್ಷಗಳು ಮಾಧ್ಯಮಗಳು ಮತ್ತು ಇತರ ಮೂಲಗಳಿಂದಲೂ ತಮ್ಮ ಚುನಾವಣಾ ಕರ್ತವ್ಯ ಬಗ್ಗೆ ಮಾಹಿತಿ ಬರುತ್ತವೆ. ನಾನು ಸಹ ಜಿಲ್ಲೆಯ ತುಂಬ ಸ್ವತಃ ಪ್ರಯಾಣಿಸಿ, ಹಗಲು-ರಾತ್ರಿ ನಿಯೋಜಿತ ತಂಡಗಳ ಕಾರ್ಯವನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಅವರು ಎಚ್ಚರಿಸಿದರು.

ಚುನಾವಣಾ ಸಹಾಯವಾಣಿ, ಕಂಟ್ರೋಲ್ ರೂಂ ಸರಿಯಾಗಿ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು. ಯಾವುದೇ ಚುನಾವಣಾ ಸಿಬ್ಬಂದಿ ಪೂರ್ವಾನುಮತಿ ಪಡೆಯದೇ ರಜೆ ಹೋಗುವುದಾಗಲಿ ಅಥವಾ ಗೈರು ಹಾಜರಾಗುವುದಾಗಲಿ ಮಾಡುವಂತಿಲ್ಲ ಇದನ್ನು ಆಯಾ ನೋಡಲ್ ಅಧಿಕಾರಿಗಳು ನಿಗಾವಹಿಸಬೇಕು. ಕರ್ತವ್ಯದಲ್ಲಿ ಉದಾಸೀನತೆ ತೋರುವ, ನಿಯಮ ಮೀರುವ ಸಿಬ್ಬಂದಿ, ಅಧಿಕಾರಿಗಳಿಗೆ ಆಯಾ ನೊಡಲ್ ಅಧಿಕಾರಿಗಳು, ನೋಟಿಸ್ ನೀಡಿ, ಅವರ ಮೇಲೆ ಕ್ರಮ ಕೈಗೊಳ್ಳಲು ತಮ್ಮ ವರದಿಯೊಂದಿಗೆ ಶಿಸ್ತುಕ್ರಮಕ್ಕಾಗಿ ಜಿಲ್ಲಾ ಚುನಾವಣಾ ಆಯೋಗಕ್ಕೆ ಶಿಪಾರಸ್ಸು ಮಾಡಬೇಕೆಂದು ಅವರು ಸೂಚಿಸಿದರು.

ಅಧಿಕಾರಿಗಳಿಗೆ ನಿಯಮಾನುಸಾರ ಮತ್ತು ಅಧಿಕಾರಯುತವಾಗಿ ಚುನಾವಣಾ ಕಾರ್ಯಗಳನ್ನು ನಿರ್ವಹಿಸಲು ದಂಡಾಧಿಕಾರಿ ಅಧಿಕಾರ ಕೊಟ್ಟರೂ, ಅವರು ಸರಿಯಾಗಿ ಕೆಲಸ ಮಾಡದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಉಪ ಪೊಲೀಸ್  ಆಯುಕ್ತ ರಾಜೀವ ಎಂ. ಮಾತನಾಡಿದರು.

ಎಲ್ಲ ನೋಡಲ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿ ಚುನಾವಣಾ ತಹಶೀಲ್ದಾರ, ಶಿರಸ್ತೆದಾರರು, ವಿಷಯ ನಿರ್ವಾಹಕರು, ನೊಡಲ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು