ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರರ ಸಹಕಾರಿ ಪತ್ತಿನ ಸಂಘ ನಿಯಮಿತದ ಚುನಾವಣೆಯಲ್ಲಿ ಸೋತಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡ ನೌಕರನೋರ್ವ ಧಾರವಾಡದ ರೇಣುಕಾನಗರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಂದ್ರಕಾಂತ ಸಾವಳಗಿ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು. ಎರಡು ದಿನಗಳ ಹಿಂದೆಯಷ್ಟೇ ನಡೆದಿದ್ದ ಚುನಾವಣೆಯಲ್ಲಿ ಇವರು ಸೋತಿದ್ದರು.ಅದೇ ವಿಷಯಕ್ಕೆ ಸಾಕಷ್ಟು ಮನನೊಂದಿದ್ದ ಚಂದ್ರಕಾಂತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ, ದೂರು ದಾಖಲಿಸಿಕೊಂಡಿದ್ದಾರೆ.