News Karnataka Kannada
Sunday, May 12 2024
ಹುಬ್ಬಳ್ಳಿ-ಧಾರವಾಡ

ಅಶೋಕ್ ನೇತೃತ್ವದ ಪ್ರತಿಭಟನೆಯಲ್ಲಿ ಸಿಎಂ ನಿಂದನೆ: 42 ಮಂದಿ ವಿರುದ್ಧ ಎಫ್‌ಐಆರ್

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಕಳೆದ ಎರಡ್ಮೂರು ದಿನಗಳಿಂದ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಅಂತೆಯೇ ಆರ್.ಅಶೋಕ್ ನೇತೃತ್ವದಲ್ಲಿ ಹಬ್ಬಳ್ಳಿಯಲ್ಲಿ ಜನವರಿ 3 ರಂದು ಬೃಹತ್ ಪ್ರತಿಭಟನೆ ನಡೆದಿತ್ತು.
Photo Credit :

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಕಳೆದ ಎರಡ್ಮೂರು ದಿನಗಳಿಂದ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಅಂತೆಯೇ ಆರ್.ಅಶೋಕ್ ನೇತೃತ್ವದಲ್ಲಿ ಹಬ್ಬಳ್ಳಿಯಲ್ಲಿ ಜನವರಿ 3 ರಂದು ಬೃಹತ್ ಪ್ರತಿಭಟನೆ ನಡೆದಿತ್ತು.

ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಘೋಷಣೆ, ಭಾಷಣ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿಯ 42 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಧಾರವಾಡ ಜಿಲ್ಲಾ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಹಾಗೂ ಪಾಲಿಕೆ‌ ವಿಪಕ್ಷ ನಾಯಕಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ‌ ನಿಂದಿಸಿದ ಆರೋಪ‌ ಇದೆ.

ಭಾಷಣದ ವೇಳೆ ‘ಸಿದ್ದರಾಮಯ್ಯ ಅಲ್ಲ, ಸಿದ್ದು ಮುಲ್ಲಾ’, ‘ಸಿದ್ದರಾಮಯ್ಯ ಲುಚ್ಚಾ’ ಎಂಬ ಪದ ಬಳಕೆ ಮಾಡಿ ಬಿಜೆಪಿಗರು ಘೋಷಣೆ ಕೂಗಿದ್ದಾರೆ. ಈ ಮೂಲಕ ರಾಜ್ಯದ ಮುಖ್ಯಮಂತ್ರಿಯ ಮಾನಹಾನಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು