ಹುಬ್ಬಳ್ಳಿ: ಗಣೇಶ ಚತುರ್ಥಿ ಹಿನ್ನಲೆಯಲ್ಲಿ ನಗರದ ಎಪಿಎಂಸಿ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಲಾಯಿತು.
೨೦ ಕ್ಕೂ ಹೆಚ್ಚು ರೌಡಿ ಶೀಟರ್ ಗಳನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಲಾಯಿತು ಅಲ್ಲದೇ ಮುಂಬರುವ ಗಣೇಶ ಚತುರ್ಥಿ ಹಬ್ಬಕ್ಕೆ ಯಾವುದೇ ರೀತಿಯಾಗಿ ಸಾರ್ವಜನಿಕರಿಗೆ ತೊಂದರೆ ನೀಡಬಾರದು ಎಂದು ಸೂಚನೆ ನೀಡಲಾಯಿತು. ರೌಡಿಗಳಿಗೆ ನವನಗರ ಠಾಣೆಯ ಸಬ್ ಇನ್ಸೆಕ್ಟರ್ ಬಿ. ಎನ್.ಸಾತನ್ನವರ ನೇತೃತ್ವದಲ್ಲಿ ರೌಡಿ ಶೀಟರ್ ಪರೇಡ್ ನಡೆಸಲಾಯಿತು.