ಕುಂದಗೋಳ: ಜನರು ಪಟಾಕಿ ಸಿಡಿಸುತ್ತಿರುವ ಬೆನ್ನಲ್ಲೇ ಪಟಾಕಿಯ ಬೆಂಕಿ ತಗುಲಿ ಸಾರ್ವಜನಿಕ ಸ್ಥಳದಲ್ಲಿನ ಕಸಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಕುಂದಗೋಳ ಪಟ್ಟಣದಲ್ಲಿ ಇಂದು ನಡೆದಿದೆ.
ಕುಂದಗೋಳ ಪಟ್ಟಣದ ಮೂರಂಗಡಿ ಕೂಟ್ ಹಿಂಭಾಗದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಎಸೆದಿದ್ದ ಕಸಕ್ಕೆ ಬೆಂಕಿ ತಗುಲಿ ಸಂಪೂರ್ಣ ಕಸಕ್ಕೆ ವ್ಯಾಪಿಸಿ ಧಗಧಗಿಸ ತೊಡಗಿದೆ. ತಕ್ಷಣ ಸ್ಥಳೀಯರು ಬೆಂಕಿಯನ್ನು ಗಮನಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಅಗ್ನಿಶಾಮಕದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ.
ಅದೃಷ್ಟವಶಾತ್ ಆಕಸ್ಮಿಕ ಬೆಂಕಿಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಸದ್ಯ ಸ್ಥಳೀಯರ ಸಮಯಪ್ರಜ್ಞೆ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳ ಕಾರ್ಯಕ್ಷಮತೆಯಿಂದ ಅನಾಹುತ ತಪ್ಪಿದಂತಾಗಿದೆ.