ಹಳೇಹುಬ್ಬಳ್ಳಿ ಗಲಭೆ ಪ್ರಕರಣ : 109 ಮಂದಿಗೆ ಬಿಡುಗಡೆ ಭಾಗ್ಯ

ಹುಬ್ಬಳ್ಳಿ :  ಹಳೇಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ 109 ಮಂದಿಗೆ ಬಿಡುಗಡೆಯಾಗಿದ್ದಾರೆ. ಧಾರವಾಡ ಕಾರಾಗೃಹದಿಂದ 40, ಬಳ್ಳಾರಿ ಕಾರಾಗೃಹದಿಂದ 8 ಹಾಗೂ ಬೆಳಗಾವಿಯಿಂದ 61 ಜನರು ಬಿಡುಗಡೆಯಾಗಿದ್ದಾರೆ.

ಕಳೆದ ಫೆ.15 ಶುಕ್ರವಾರದಂದು ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಆರೋಪಿತರಿಗೆ ಶೂರಿಟಿ ನೀಡುವ ಕುರಿತು ಬಿಡುಗಡೆ ವಿಳಂಬವಾಗಿತ್ತು. ಬೆಂಗಳೂರು ಮೂಲದ ಓರ್ವ ಹಿಂದೂ ಸೇರಿ ನಾಲ್ವರು 20 ಕೋಟಿ ಶೂರಿಟಿ ನೀಡಿದ್ದರಿಂದ 109 ಜನರ ಬಿಡುಗಡೆ ಪ್ರಕ್ರಿಯೆ ನಡೆದು ಹೊರಬಂದರು.

ಧಾರವಾಡ ಮತ್ತು ಬಳ್ಳಾರಿಯಿಂದ ಬಂದವರು ದರ್ಗಾಕ್ಕೆ ಹೋಗಿ ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಬೆಳಗಾವಿ ಕಾರಾಗೃಹದಲ್ಲಿರುವವರನ್ನು ಒಬ್ಬೊಬ್ಬರಾಗಿ ವೈದ್ಯಕೀಯ ಪರೀಕ್ಷೆ ನಡೆದು ಅವರು ಕೂಡ ರಾತ್ರಿ ಬಿಡುಗಡೆಯಾಗಿದ್ದಾರೆ.

ಘಟನೆ : 2022ರ ಏಪ್ರಿಲ್ 16ರಂದು ಯುವಕನೊಬ್ಬ ವಿವಾದಾತ್ಮಕ ಎನಿಮೇಟೆಡ್ ವಾಟ್ಸ್ಆ್ಯಪ್ ವಿಡಿಯೊ ಸ್ಟೇಟಸ್‌ ಹಾಕಿದ ಹಿನ್ನೆಲೆಯಲ್ಲಿ ಹಳೇಹುಬ್ಬಳ್ಳಿ ಪೊಲೀಸ್‌ ಠಾಣೆ ಎದುರು ಗಲಭೆ ಆಗಿತ್ತು. ಕೆಲವರು ಕಲ್ಲು ತೂರಾಟ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ್ದರು. ಪೊಲೀಸ್‌ ವಾಹನಗಳು ಜಖಂಗೊಂಡಿದ್ದವು. ಒಂದು ಸಾವಿರಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಿ, 155 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದರು.

Nisarga K

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

8 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

9 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

9 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

9 hours ago