ಕುಂದಗೋಳ: ನಾಳೆ ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ಒಂದು ದಿನ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಭಾರಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಎಸ್ಪಿ ಲೋಕೆಶ್ ಜಗಲಾಸ ಹೇಳಿದರು.
ಮತದಾನ ಪ್ರಕ್ರಿಯೆಗೆ ಕುಂದಗೋಳ ಮತ ಕ್ಷೇತ್ರದಲ್ಲಿ 514 ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಚುನಾವಣೆ ಭದ್ರತೆಗೆ ಬೇಕಾದ ಎಲ್ಲ ರೀತಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭದ್ರತಾ ಕಾರ್ಯದಲ್ಲಿ 2 ಡಿಎಸ್’ಪಿ, 3 ಸರ್ಕಲ್ ಇನ್ಸ್’ಪೆಕ್ಟರ್, 7 ಜನ ಪಿಎಸ್’ಐ 4 ಜನ ಎಎಸ್’ಐ, 248 ಸಿವಿಲ್ ಸಿಬ್ಬಂದಿ ಸೇರಿದಂತೆ 250 ಕೇಂದ್ರ ಸಿಬ್ಬಂದಿ ಕೂಡ ನಿಯೋಜಿಸಲಾಗಿದೆ ಎಂದು ಎಸ್ಪಿ ಜಗಲಾಸರ್ ಹೇಳಿದರು.
ವಿಧಾನಸಭೆ ಚುನಾವಣಾ ಮತದಾನಕ್ಕೆ ಇನ್ನೆನು ಕೆಲವೇ ಗಂಟೆಗಳು ಬಾಕಿ ಇದ್ದು, ಭದ್ರತೆ ಹಿತದೃಷ್ಟಿಯಿಂದ ಕುಂದಗೋಳ ಮತ ಕ್ಷೇತ್ರದೆಲ್ಲೆಡೆ ಅಹಿತಕರ ಘಟನೆ ನಡೆಯಬಾರದು ಎಂದು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಹೇಳಿದರು.