ಹುಬ್ಬಳ್ಳಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತದಾನ ಪ್ರಕ್ರಿಯೆ ನಡೆದಿದ್ದು ಹುಬ್ಬಳ್ಳಿಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರಲ್ಲಾದ ಜೋಶಿ ಅವರು ಕುಟುಂಬ ಸಮೇತ ಮತದಾನ ಮಾಡಿದರು. ನಂತರ ಎಲ್ಲರೂ ಸಹ ಮತ ಹಾಕಿ ಸದೃಢ ದೇಶ ಕಟ್ಟೋಣಾ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಹಾಗೂ ಸಂಬಂಧಿಕರು ಉಪಸ್ಥಿತರಿದ್ದರು.
ಇನ್ನು ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರು ತಮ್ಮ ಕುಟುಂಬ ಸಮೇತ ಮತದಾನ ಮಾಡಿ ನಾವು ಮತದಾನ ಮಾಡಿದ್ದೇವೆ, ನೀವು ಬನ್ನಿ ಎಲ್ಲರೂ ಮತದಾನ ಮಾಡಿ ದೇಶದ ಅಭಿವೃದ್ಧಿಗೆ ಎಂದು ಮನವಿ ಮಾಡಿಕೊಂಡಿದ್ದಾರೆ.
ಇತ್ತ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ ನವಲಗುಂದದ ಮತಗಟ್ಟೆ 85ರಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸಬೇಕು ಎಂದು ಮನವಿ ಮಾಡಿದ ವಿನೋದ ಅಸೂಟಿ, ಎಲ್ಲರೂ ಈ ಪ್ರಜಾತಂತ್ರದ ಹಬ್ಬದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.
ಹಾಗು , ನವಲಗುಂದ ಕ್ಷೇತ್ರದ ಶಾಸಕ ಎನ್ ಎಚ್ ಕೋನರೆಡ್ಡಿ, ಅವರು ನವಲಗುಂದ ತಾಲೂಕಿನ ಚಿಲಕವಾಡದ ಮತಗಟ್ಟೆ ಸಂಖ್ಯೆ 117 ರಲ್ಲಿ ಮತ ಚಲಾಯಿಸಿದ್ರು. ಶಾಸಕ ಎನ್ ಎಚ್ ಕೋನರೆಡ್ಡಿ, ಅವರ ಧರ್ಮಪತ್ನಿ ಪ್ರೇಮಾ ಕೋನರೆಡ್ಡಿ, ಪುತ್ರ ನವೀನ ಕೋನರೆಡ್ಡಿ, ಪುತ್ರಿ ನಿವೇದಿತಾ ಕೋನರೆಡ್ಡಿ, ರಾಜೇಶ ಕೋನರೆಡ್ಡಿ ಮತ ಚಲಾಯಿಸಿದರು.