News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಅನಗತ್ಯವಾಗಿ ಅರೆಸ್ಟ್​ ಆದವರಿಗೆ ಸಿಕ್ತು ಜಾಮೀನು

Dharwd
Photo Credit :

ಧಾರವಾಡ : ತಾಲೂಕಿನ ತಡಕೋಡ ಗ್ರಾಮದಲ್ಲಿ ಉಂಟಾಗಿದ್ದ ಗಲಾಟೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಹಿಂದೂ ಕಾರ್ಯಕರ್ತರಿಗೆ ಇಂದು ಜಾಮೀನು ಮಂಜೂರಾಗಿದ್ದು, ಎಲ್ಲ ಹಿಂದೂ ಕಾರ್ಯಕರ್ತರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ತಡಕೋಡ ಗ್ರಾಮದ ಸದ್ದಾಂಹುಸೇನ್ ಎಂಬಾತ ಅಯೋಧ್ಯೆ ರಾಮಮಂದಿರದ ಫೋಟೋದ ಮೇಲೆ ಹಸಿರು ಧ್ವಜ, ಓವೈಸಿ ಫೋಟೋ ಹಾಕಿ ಇದು ಇಸ್ಲಾಮಿಕ್ ಪವ‌ರ್ ಎಂಬ ಸಂದೇಶ ಹಾಕಿ ಎಡಿಟ್ ಮಾಡಿದ್ದ ಫೋಟೋವನ್ನು ತನ್ನ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದ.

ಇದರಿಂದ ಕೆರಳಿದ್ದ ಹಿಂದೂ ಕಾರ್ಯಕರ್ತರು ತಡಕೋಡ ಗ್ರಾಮದ ಈದ್ದಾ ಕಟ್ಟಡದ ಗುಂಬಜ್ ಒಡೆದು ಆಕ್ರೋಶ ಹೊರ ಹಾಕಿದ್ದರು. ಆಗ ಗರಗ ಠಾಣೆ ಪೊಲೀಸರು ಕೆಲ ಹಿಂದೂ ಕಾರ್ಯಕರ್ತರನ್ನೂ ಬಂಧಿಸಿ ಕೇಂದ್ರ ಕಾರಾಗೃಹದಲ್ಲಿಟ್ಟಿದ್ದರು. ಇಂದು ಎಲ್ಲ ಹಿಂದೂ ಕಾರ್ಯಕರ್ತರಿಗೆ ಜಾಮೀನು ಮಂಜೂರಾಗಿದ್ದು, ಮಾಜಿ ಶಾಸಕ ಅಮೃತ ದೇಸಾಯಿ ಅವರು ಸ್ವತಃ ಕೇಂದ್ರ ಕಾರಾಗೃಹಕ್ಕೆ ತೆರಳಿ ಜೈಲಿನಿಂದ ಬಿಡುಗಡೆಗೊಂಡ ಹಿಂದೂ ಕಾರ್ಯಕರ್ತರನ್ನು ಬರಮಾಡಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು