ಧಾರವಾಡ: ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ 2023-24ನೇ ಸಾಲಿನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೊಸ ಪ್ರದೇಶ ವಿಸ್ತರಣೆಯಡಿ ತೆಂಗು, ಅಡಿಕೆ, ಸಪೋಟ, ಗೇರು, ಮಾವು, ದಾಳಿಂಬೆ, ಪೇರಲ, ಬಾಳೆ, ಗುಲಾಬಿ, ಕರಿಬೇವು, ಮಲ್ಲಿಗೆ, ಪಪ್ಪಾಯಿ, ನುಗ್ಗೆ ಮತ್ತು ಇನ್ನಿತರೆ ತೋಟಗಾರಿಕೆ ಬೆಳೆಗಳನ್ನು ಅಭಿವೃದ್ದಿಪಡಿಸಲು, ಸಾಂಬಾರು ಮತ್ತು ಅಪ್ರಧಾನ ಹಣ್ಣುಗಳನ್ನು ಗುಚ್ಚ ಮಾದರಿಯಲ್ಲಿ ಅಭಿವೃದ್ದಿಪಡಿಸಲು ಹಾಗೂ ಹನಿನೀರಾವರಿ ಒಗ್ಗೂಡಿಸುವಿಕೆಗೆ ಸಹಾಯಧನ ಸೌಲಭ್ಯಗಳಿವೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಮತ್ತು ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳನ್ನು ಸಂಪರ್ಕಿಸಬಹುದೆಂದು ಧಾರವಾಡ ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.