ಚಿಟಗುಪ್ಪಿ ಆಸ್ಪತ್ರೆ ವೈದ್ಯರ ಸಾಧನೆ : ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮಾಡಿದ ಡಾ. ಶ್ರೀಧರ

ಹುಬ್ಬಳ್ಳಿ:  ಬಡವರ ಪಾಲಿನ ಸಂಜೀವಿನಿ ಎಂದು ಕರೆಸಿಕೊಳ್ಳುವ ಕಿಮ್ಸ್ ಆಸ್ಪತ್ರೆಯಂತೆಯೇ, ಚಿಟಗುಪ್ಪಿ ಆಸ್ಪತ್ರೆಯ ವೈದ್ಯರು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ಮೂವರು ಮಹಿಳೆಯರಿಗೆ ಮರುಜೀವ ನೀಡಿದ್ದಾರೆ. ಅದೇನು ಅಂತೀರಾ ಈ ಸ್ಟೋರಿ ನೋಡಿ

ಹೌದು, ಹುಬ್ಬಳ್ಳಿ ಜನತೆಗೆ ಹಾಗೂ ಅಕ್ಕಪಕ್ಕದ ಊರಿನ ಜನರಿಗೆ ಚಿಟಗುಪ್ಪಿ ಆಸ್ಪತ್ರೆಯು ಉತ್ತಮ ಸೇವೆಯನ್ನು ನೀಡುತ್ತಾ ಬಂದಿದೆ. ಇಲ್ಲಿ ಮಹಿಳೆಯರಿಗೆ ಸುರಕ್ಷಿತ ಹೆರಿಗೆ ಹಾಗೂ ಸಂತಾನಹರಣ ಶಸ್ತ್ರ ಚಿಕಿತ್ಸೆ ಸೇರಿ ವಿವಿಧ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ ನೇತೃತ್ವದಲ್ಲಿ ಮೂವರು ಮಹಿಳೆಯರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆನಡೆಸಿದ್ದಾರೆ ಮಾಡಿ ಜೀವ ಉಳಿಸಿದ್ದಾರೆ.

ಹುಬ್ಬಳ್ಳಿಯ 46 ವರ್ಷದ ಫಕ್ಕಿರವ್ವ ನಾಗಸಮುದ್ರ ಎಂಬ ಕಾರ್ಮಿಕ ಮಹಿಳೆಯೊಬ್ಬಳು ರಕ್ತದ ಹೀನತೆಯಿಂದ ಬಳಲುತ್ತಿದ್ದಳು, ಮಹಿಳೆಯ ಹೊಟ್ಟೆಯಲ್ಲಿ ಸರಿಸುಮಾರು 2.4 ಕೆಜಿ ಯಷ್ಟು ಫ್ರೈಬ್ರಾಯ್ಡ್ ಗಡ್ಡೆ ಇರುವುದು ಪತ್ತೆಯಾಗಿತ್ತು, ಕೊನ್ನೂರು ಗ್ರಾಮದ 70 ವರ್ಷದ ವೃದ್ದೆಯೊಬ್ಬರು ಲಾರ್ಜ್ ಓರಿಯನ್ ಟ್ಯೂಮರ್ ಅಂದ್ರೆ ಅಂಡಾಶಯದ ಕ್ಯಾನ್ಸರ್ ಗಡ್ಡೆಯಿಂದ ಬಳಲುತ್ತಿದ್ದರು. ಇನ್ನೊಂದು ಕ್ಲಿಷ್ಟಕರ ಚಿಕಿತ್ಸೆಯಲ್ಲಿ ಹಾರೋಬೆಳವಡಿಯ 43 ವರ್ಷದ ಮಹಿಳೆಯು ಫ್ರೈಬ್ರಾಯ್ಡ್ ಗಡ್ಡೆಯಿಂದ ಬಳಲುತ್ತಿದ್ದರು. ಇದನ್ನು ಡಾ. ಶ್ರೀಧರ ದಂಡೆಪ್ಪನವರ ಶಸ್ತ್ರ ಚಿಕಿತ್ಸೆ ಮಾಡುವುದರ ಮೂಲಕ ಮೂವರು ಮಹಿಳೆಯರಿಗೆ ಮರುಜೀವ ನೀಡಿದ್ದಾರೆ.

ಒಟ್ಟಾರೆ ಹೇಳುವುದಾದರೆ ಚಿಟಗುಪ್ಪಿ ಆಸ್ಪತ್ರೆಯ ಈಗ ಬಡವರ ಪಾಲಿನ ಸಂಜೀವಿನಿಯಾಗಿದೆ. ಹೆರಿಗೆ ಜೊತೆ ಸಾಕಷ್ಟು ಮಹಿಳೆಯರ ಕ್ಯಾನ್ಸರ್ ಗಡ್ಡಿಗೆ ಆಪರೇಷನ್ ಮಾಡಿ ಜೀವ ಉಳಿಸಿದ್ದಾರೆ. ಇವರ ಕಾರ್ಯಕ್ಕೆ ಹುಬ್ಬಳ್ಳಿ ಧಾರವಾಡ ಜನತೆ ಧನ್ಯವಾದ ತಿಳಿಸಿದ್ದಾರೆ.

Nisarga K

Recent Posts

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

2 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

8 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

20 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

39 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

49 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

1 hour ago