News Karnataka Kannada
Monday, May 06 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಮರುಪ್ರಕಟ ಒತ್ತಾಯ

A delegation of working journalists' association has warned the government in Hubballi
Photo Credit : News Kannada

ಹುಬ್ಬಳ್ಳಿ: ಮಾಧ್ಯಮ ಅಕಾಡೆಮಿಯ ನಾಲ್ಕು ವರ್ಷಗಳ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು, ಆಯಾ ಪುರಸ್ಕೃತರು ಕೆಲಸ ಮಾಡುತ್ತಿರುವ ಜಿಲ್ಲೆಯ ಹೆಸರಿನ ಜೊತೆಗೆ ಮರುಪ್ರಕಟಿಸಬೇಕೆಂದು ಒತ್ತಾಯಿಸಿ, ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ತಹಶೀಲ್ದಾರ್‌  ಮೂಲಕ‌ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ನಗರದ ಮಿನಿ ವಿಧಾಸೌಧ ಕಚೇರಿ‌ ಮುಂಭಾಗದಲ್ಲಿ ಪ್ರತಿಭಟಿಸಿದ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಮಾಧ್ಯಮ ಅಕಾಡೆಮಿಯಿಂದ ಕೊಡಮಾಡುವ ನಾಲ್ಕು ವರ್ಷಗಳ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು, ಆಯಾ ಪುರಸ್ಕೃತರು ಕೆಲಸ ಮಾಡುತ್ತಿರುವ ಜಿಲ್ಲೆಯ ಹೆಸರಿನ ಜೊತೆಗೆ ಮರುಪ್ರಕಟಿಸಬೇಕು. ಇಲ್ಲವಾದರೆ ನಾವು ಮಾರ್ಚ್ 13ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮಾಧ್ಯಮ ಅಕಾಡೆಮಿ ಸದ್ಯ ಪ್ರಶಸ್ತಿ ನೀಡಿರುವ ಪತ್ರಕರ್ತರ ಆಯಾ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿಲ್ಲ. ಕೆಲವರು ಬೆಂಗಳೂರಿನಲ್ಲಿ ವೃತ್ತಿಯಲ್ಲಿದ್ದರೆ ಇನ್ನೂ ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸದ್ಯ ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಗಳಲ್ಲಿ ಹೆಸರಿನಲ್ಲಿ ಪ್ರಶಸ್ತಿ ಮರುಪ್ರಕಟಿಸಿ ಪ್ರಾಂತ್ಯವಾರು ಸಮತೋಲನ ಕಾಪಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದಲ್ಲದೇ ಪತ್ರಕರ್ತರ ಮನವಿ ಸರ್ಕಾರ ಸ್ಪಂದಿಸದೇ ಇದ್ದರೆ ಪ್ರಶಸ್ತಿ ಸಮಾರಂಭದಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.

ಪತ್ರಕರ್ತರ ನಿಯೋಗದಲ್ಲಿ ಹಿರಿಯ ಪತ್ರಕರ್ತರಾದ ಸುಭಾಷ ಹೂಗಾರ, ಸಂಗಮೇಶ ಮೆಣಸಿನಕಾಯಿ, ವಿಜಯ ಹೂಗಾರ, ಅಬ್ಬಾಸ ಮುಲ್ಲಾ, ಬಸವರಾಜ ಹೂಗಾರ, ಹನುಮಂತ ಗಡ್ಡದ, ಯಲ್ಲಪ್ಪ ಸೋಲಾರಗೊಪ್ಪ, ಶಿವರಾಮ ಅಸುಂಡಿ, ಓದೇಶ ಸಕಲೇಶಪೂರ, ಪರಶುರಾಮ ತಹಶೀಲ್ದಾರ, ಈರಣ್ಣ ವಾಲಿಕಾರ, ಮೈಲಾರ ಪಟಾತ್, ನವೀನ ಸೋಲಾರಗೊಪ್ಪ, ಯಲ್ಲಪ್ಪ ಕುಂದಗೋಳ, ಶಿವಾಜಿ, ಆನಂದ, ರಾಜು ರೋಹನ ಹುನಸ್ವಾಡ್ಕರ್, ಮಹೇಶ ಸೇರಿದಂತೆ ಇತರ ಪತ್ರಕರ್ತ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು