ಹುಬ್ಬಳ್ಳಿ: ಮಾಧ್ಯಮ ಅಕಾಡೆಮಿಯ ನಾಲ್ಕು ವರ್ಷಗಳ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು, ಆಯಾ ಪುರಸ್ಕೃತರು ಕೆಲಸ ಮಾಡುತ್ತಿರುವ ಜಿಲ್ಲೆಯ ಹೆಸರಿನ ಜೊತೆಗೆ ಮರುಪ್ರಕಟಿಸಬೇಕೆಂದು ಒತ್ತಾಯಿಸಿ, ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ನಗರದ ಮಿನಿ ವಿಧಾಸೌಧ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿದ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಮಾಧ್ಯಮ ಅಕಾಡೆಮಿಯಿಂದ ಕೊಡಮಾಡುವ ನಾಲ್ಕು ವರ್ಷಗಳ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು, ಆಯಾ ಪುರಸ್ಕೃತರು ಕೆಲಸ ಮಾಡುತ್ತಿರುವ ಜಿಲ್ಲೆಯ ಹೆಸರಿನ ಜೊತೆಗೆ ಮರುಪ್ರಕಟಿಸಬೇಕು. ಇಲ್ಲವಾದರೆ ನಾವು ಮಾರ್ಚ್ 13ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಮಾಧ್ಯಮ ಅಕಾಡೆಮಿ ಸದ್ಯ ಪ್ರಶಸ್ತಿ ನೀಡಿರುವ ಪತ್ರಕರ್ತರ ಆಯಾ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿಲ್ಲ. ಕೆಲವರು ಬೆಂಗಳೂರಿನಲ್ಲಿ ವೃತ್ತಿಯಲ್ಲಿದ್ದರೆ ಇನ್ನೂ ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸದ್ಯ ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಗಳಲ್ಲಿ ಹೆಸರಿನಲ್ಲಿ ಪ್ರಶಸ್ತಿ ಮರುಪ್ರಕಟಿಸಿ ಪ್ರಾಂತ್ಯವಾರು ಸಮತೋಲನ ಕಾಪಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದಲ್ಲದೇ ಪತ್ರಕರ್ತರ ಮನವಿ ಸರ್ಕಾರ ಸ್ಪಂದಿಸದೇ ಇದ್ದರೆ ಪ್ರಶಸ್ತಿ ಸಮಾರಂಭದಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.
ಪತ್ರಕರ್ತರ ನಿಯೋಗದಲ್ಲಿ ಹಿರಿಯ ಪತ್ರಕರ್ತರಾದ ಸುಭಾಷ ಹೂಗಾರ, ಸಂಗಮೇಶ ಮೆಣಸಿನಕಾಯಿ, ವಿಜಯ ಹೂಗಾರ, ಅಬ್ಬಾಸ ಮುಲ್ಲಾ, ಬಸವರಾಜ ಹೂಗಾರ, ಹನುಮಂತ ಗಡ್ಡದ, ಯಲ್ಲಪ್ಪ ಸೋಲಾರಗೊಪ್ಪ, ಶಿವರಾಮ ಅಸುಂಡಿ, ಓದೇಶ ಸಕಲೇಶಪೂರ, ಪರಶುರಾಮ ತಹಶೀಲ್ದಾರ, ಈರಣ್ಣ ವಾಲಿಕಾರ, ಮೈಲಾರ ಪಟಾತ್, ನವೀನ ಸೋಲಾರಗೊಪ್ಪ, ಯಲ್ಲಪ್ಪ ಕುಂದಗೋಳ, ಶಿವಾಜಿ, ಆನಂದ, ರಾಜು ರೋಹನ ಹುನಸ್ವಾಡ್ಕರ್, ಮಹೇಶ ಸೇರಿದಂತೆ ಇತರ ಪತ್ರಕರ್ತ ಇದ್ದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…