News Karnataka Kannada
Thursday, May 09 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಗೋಹತ್ಯೆ ನಿಷೇಧಿಸಿ ಸೂಕ್ತ ಕ್ರಮಕ್ಕಾಗಿ ಮನವಿ ಸಲ್ಲಿಕೆ

Hubballi: A petition has been filed seeking a ban on cow slaughter and appropriate action.
Photo Credit : News Kannada

ಹುಬ್ಬಳ್ಳಿ: ‘ಹಳೇಹುಬ್ಬಳ್ಳಿಯ ಅಲ್ತಾಫ್‌ ಪ್ಲಾಟ್‌ನ ಕಾಲುವೆ ಬಳಿಯ ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಗೋವುಗಳ ಹತ್ಯೆ ನಡೆಯುತ್ತಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಬಜರಂಗದಳದ ಪದಾಧಿಕಾರಿಗಳು ಪೊಲೀಸ್‌ ಕಮಿಷನರ್‌ ರಮನ್‌ ಗುಪ್ತಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಧಾರವಾಡ ವಿಭಾಗದ ಸಂಚಾಲಕ ಶಿವಾನಂದ ಸತ್ತಿಗೇರಿ ನೇತೃತ್ವದಲ್ಲಿ ಮನವಿ ಸಲ್ಲಿಸಿರುವ ಅವರು, ‘ಕಸಾಯಿಖಾನೆಯಲ್ಲಿ ಅಕ್ರಮವಾಗಿ ಗೋವುಗಳ ಹತ್ಯೆ ನಡೆಯುತ್ತಿರುವುದು ಹಾಗೂ ಮಕ್ಕಳು ಸಹ ಅದರಲ್ಲಿ ನಿರತರಾಗಿರುವ ಕುರಿತು ಮಾಹಿತಿ ಇದೆ. ಅಲ್ಲಿರುವ 30ಕ್ಕೂ ಹೆಚ್ಚು ಗೋವುಗಳ ರಕ್ಷಣೆ ಮಾಡಿ, ಸಂಬಂಧಪಟ್ಟವರ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು.

ಈ ಕುರಿತು ಕ್ರಮ ಕೈಗೊಳ್ಳದ ಕಸಬಾ ಠಾಣೆ ಇನ್‌ಸ್ಪೆಕ್ಟರ್‌ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು. ಇಲ್ಲದಿದ್ದರೆ, ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಕಾರ್ಯಕರ್ತರು ಕಸಾಯಿಖಾನೆ ಮೇಲೆ ದಾಳಿ ನಡೆಸಲಿದ್ದಾರೆ’ ಎಂದು ಮನವಿ ಪತ್ರದಲ್ಲಿ ಎಚ್ಚರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು