ಹುಬ್ಬಳ್ಳಿ: ‘ಹಳೇಹುಬ್ಬಳ್ಳಿಯ ಅಲ್ತಾಫ್ ಪ್ಲಾಟ್ನ ಕಾಲುವೆ ಬಳಿಯ ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಗೋವುಗಳ ಹತ್ಯೆ ನಡೆಯುತ್ತಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಬಜರಂಗದಳದ ಪದಾಧಿಕಾರಿಗಳು ಪೊಲೀಸ್ ಕಮಿಷನರ್ ರಮನ್ ಗುಪ್ತಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಧಾರವಾಡ ವಿಭಾಗದ ಸಂಚಾಲಕ ಶಿವಾನಂದ ಸತ್ತಿಗೇರಿ ನೇತೃತ್ವದಲ್ಲಿ ಮನವಿ ಸಲ್ಲಿಸಿರುವ ಅವರು, ‘ಕಸಾಯಿಖಾನೆಯಲ್ಲಿ ಅಕ್ರಮವಾಗಿ ಗೋವುಗಳ ಹತ್ಯೆ ನಡೆಯುತ್ತಿರುವುದು ಹಾಗೂ ಮಕ್ಕಳು ಸಹ ಅದರಲ್ಲಿ ನಿರತರಾಗಿರುವ ಕುರಿತು ಮಾಹಿತಿ ಇದೆ. ಅಲ್ಲಿರುವ 30ಕ್ಕೂ ಹೆಚ್ಚು ಗೋವುಗಳ ರಕ್ಷಣೆ ಮಾಡಿ, ಸಂಬಂಧಪಟ್ಟವರ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು.
ಈ ಕುರಿತು ಕ್ರಮ ಕೈಗೊಳ್ಳದ ಕಸಬಾ ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು. ಇಲ್ಲದಿದ್ದರೆ, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಕಸಾಯಿಖಾನೆ ಮೇಲೆ ದಾಳಿ ನಡೆಸಲಿದ್ದಾರೆ’ ಎಂದು ಮನವಿ ಪತ್ರದಲ್ಲಿ ಎಚ್ಚರಿಸಿದ್ದಾರೆ.
ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…
ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…
ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…
ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…
ತಾಜ್ಮಹಲ್ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ ಸಂಬಂಧಿಸಿದಂತೆ ಎಚ್ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…