ಹುಬ್ಬಳ್ಳಿ: ಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣವೆಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕು ಎಂದು ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡಾ. ಶರಣಪ್ಪ ಕೊಟಗಿ ಒತ್ತಾಯಿಸಿದರು.
ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹುಬ್ಬಳ್ಳಿಯ ಗುಲಾಬಿ ವನದಲ್ಲಿದ್ದ ಶ್ರೀ ಜಗಜ್ಯೋತಿ ಬಸವಣ್ಣನವರ ಪುತ್ಥಳಿಯನ್ನು ತೆರವುಗೊಳಿಸಿದ್ದು, ಗುಲಾಬಿ ವನದಲ್ಲಿದ್ದ ಪುತ್ಥಳಿಯನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದ ಗೇಟ್ ಬಳಿ ಸ್ಥಾಪಿಸಬೇಕು, ಅಲ್ಲದೇ ಗುಲಾಬಿ ವನದಲ್ಲಿ ಅತೀ ವಿಸ್ತಾರವಾದ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಕೇಂದ್ರ ಸಚಿವರಾದ ಪ್ರಲ್ಲಾದ್ ಜೋಶಿಯವರು ನಮ್ಮ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕೆಂದ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕೇಂದ್ರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಲಾಗುವುದು ಎಂದರು.