ಹುಬ್ಬಳ್ಳಿ: ಇಡೀ ವರ್ಷವಿಡಿ ಬೆಳೆದ ಬಾಳೆ ಗಿಡಗಳು ಬಿರುಗಾಳಿ ರಭಸಕ್ಕೆ ನೆಲಸಮವಾದ ಘಟನೆ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ.
500 ಬಾಳೆ ಗಿಡಗಳು ನೆಲಕಚ್ಚಿ ಅಂದಾಜು 5 ಲಕ್ಷ ರೂ.ದಷ್ಟು ಹಾನಿಯಾಗಿವೆ. ರೈತ ಅಪ್ಪಯ್ಯ ವಸ್ತ್ರದ ಎಂಬುವರ ಹೊಲದಲ್ಲಿ ಸಂಜೆಹೊತ್ತಿಗೆ ಬೀಸಿದ ಬಿರುಗಾಳಿ ಹೊಡೆತಕ್ಕೆ ಬಾಳೆಗಿಡಗಳು ಸಂಪೂರ್ಣ ನಾಶವಾಗಿ ನೆಲಸಮವಾಗಿ ಬಿಟ್ಟಿವೆ. ಸುಮಾರು ಒಂದೂವರೆ ಎಕ್ರೆ ಬಾಳೆಬೆಳೆ ನೆಲ ಕಚ್ಚಿಕೊಂಡು ಬಿಟ್ಟಿದೆ. ವರ್ಷವಿಡೀ ಲಕ್ಷ ರೂಪಾಯಿ ಖರ್ಚು ಮಾಡಿ ಬೆಳೆಸಿದ ಬಾಳೆ ಬೆಳೆಯೂ ಇನ್ನೇನು ವಾರ ಕಳೆಯುವಷ್ಟರಲ್ಲಿಯೇ ಕಟಾವ್ ಆಗಿ ಮಾಡಿದ ಸಾಲ ಹರಿಯುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತನ ಬದುಕಿಗೆ, ಒಂದೇ ದಿನದಲ್ಲಿ ಬಿರುಗಾಳಿ ಭೂತ ಮುಳ್ಳಾಗಿ ಬಂದು ರೈತನ ಬದುಕನ್ನೇ ಕಿತ್ತುಕೊಂಡಿದೆ.
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.