ಹುಬ್ಬಳ್ಳಿ : 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರವನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ, ನಗರದ ವುಮೆನ್ಸ್ ಕಾಲೇಜು ಪಕ್ಕದಲ್ಲಿರುವ ಗ್ಯಾಲಕ್ಸಿ ಮಾಲ್ನಲ್ಲಿ ಆರಂಭ ಮಾಡಿದ್ದು, ಬಿಜೆಪಿ ರಾಜ್ಯಸಭೆ ಸದಸ್ಯ ಗೌರವ ಭಾಟಿಯಾ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಬೆಂಗಳೂರು, ಮೈಸೂರು ಮತ್ತು ಬೆಳಗಾವಿ ನಂತರ ಹುಬ್ಬಳ್ಳಿಯಲ್ಲಿ ಮಾಧ್ಯಮ ಕೇಂದ್ರ ಆರಂಭವಾಗಿದ್ದು, ಈ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಇಂದು ರಾತ್ರಿ ಅಥವಾ ನಾಳೆ ಬಿಜೆಪಿಪಟ್ಟಿ ಬಿಡುಗಡೆ ಆಗಬಹುದು: ಇಂದು ರಾತ್ರಿ ಅಥವಾ ನಾಳೆ ಬಜೆಪಿ ಪಟ್ಟಿ ಬಿಡುಗಡೆ ಆಗಬಹುದು. ಇವತ್ತು ಸಾಯಂಕಾಲ ಪಾರ್ಲಿಮೆಂಟರಿ ಮೀಟಿಂಗ್ ಫಿಕ್ಸ್ ಆಗಿದೆ. ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ನಮ್ಮ ಲಿಸ್ಟ್ ಬಿಡುಗಡೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಈ ಹಿಂದಿನ ಚುನಾವಣೆ ಸಂದರ್ಭದಲ್ಲೂ ಇದೇ ತರಹ ಆಗಿದೆ.ಹೀಗಾಗಿ ವಿಳಂಬ ಅನ್ನೋ ಪ್ರಶ್ನೆ ಬರಲ್ಲ. ಕಾಂಗ್ರೆಸ್ ಒಂದು ತಿಂಗಳ ಮುಂಚೆ 224 ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡ್ತೀವಿ ಅಂದಿದ್ರು ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮಾಡಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ ಎಲ್ಲವೂ ಫೈನಲ್ ಆಗಿ, ಇಂದು ರಾತ್ರಿ ಬಿಡುಗಡೆ ಆಗಬಹುದು.
ಹಾಲಿ ಶಾಸಕರಿಗೆ ಟಿಕೆಟ್ ತಪ್ಪೋ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದೊಂದು ಪ್ರತಿ ಇಲೆಕ್ಷನ್ ನಲ್ಲಿ ಇರೋ ಪ್ರೊಸೆಸ್ ಕೆಲವು ಕಡೆ ಶಾಸಕರ ವಿರೋಧಿ ಅಲೆ ಇರತ್ತೆ. ಕೆಲವರಿಗೆ ಆರೋಗ್ಯ ಸಮಸ್ಯೆ ಇರತ್ತೆ. ಹಾಗಾಗಿ ತಪ್ಪುತ್ತೆ ಅನ್ನೋ ಚರ್ಚೆ ಇರತ್ತೆ.
ಧಾರವಾಡದಲ್ಲಿ ಯಾರಿಗಾದ್ರೂ ಟಿಕೆಟ್ ಮಿಸ್ ಆಗತ್ತಾ ಅನ್ನೋ ಹೇಳಿಕೆಗೆ ಶೆಟ್ಟರ್ ಪ್ರತಿಕ್ರಿಯೆ ನೀಡಿ, ಅದನ್ನು ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತೆ . ನಾನು ಈ ಬಾರಿ ಸ್ಪರ್ದೆ ಮಾಡ್ತೀನಿ. ಪದೇ ಪದೇ ನಾನು ಅದಕ್ಕ ಉತ್ತರ ಕೊಡಲ್ಲ. ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದು ಖಚಿತ. ಎಲ್ಲದಕ್ಕೂ ಇಂದು ರಾತ್ರಿ ಉತ್ತರ ಸಿಗಲಿದೆ ಎಂದರು.
ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಮತ್ತಿತರರ ಉಪಸ್ಥಿತಿರಿದರು.