ಹುಬ್ಬಳ್ಳಿ: ಕೊಳೆತ ಸ್ಥಿತಿಯಲ್ಲಿ ಕೆರೆಯಲ್ಲಿ ಶವ ಪತ್ತೆ, ಕೆರೆ ನೀರು ಹೊರ ಹಾಕಿದ ಗ್ರಾಮಸ್ಥರು

ಹುಬ್ಬಳ್ಳಿ: ಕೆರೆಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡು, ಮೂರ್‍ನಾಲ್ಕು ದಿನಗಳ ನಂತರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ, ಈಗ ಗ್ರಾಮಸ್ಥರು ಇಡೀ ಕೆರೆಯನ್ನೇ ಖಾಲಿ ಮಾಡುತ್ತಿರುವ ಘಟನೆ ತಾಲೂಕಿನ ಉಮಚಗಿ ಗ್ರಾಮದಲ್ಲಿ ನಡೆದಿದೆ.

ಸುತ್ತಲಿನ ಗ್ರಾಮಗಳಲ್ಲಿ ಈಗಾಗಲೇ ಒಂದಿಷ್ಟು ನೀರಿನ ಸಮಸ್ಯೆ ಉಂಟಾಗಿದ್ದರೂ ಇಲ್ಲಿ ಮಾತ್ರ ಅಂತಹ ಸಮಸ್ಯೆ ಕಂಡಿರಲಿಲ್ಲ. ಆದರೆ ಗ್ರಾಮದ ವ್ಯಕ್ತಿಯೊಬ್ಬ ಕೆರೆಗೆ ಬಿದ್ದು ಮೂರ್‍ನಾಲ್ಕು ದಿನಗಳ ನಂತರ ಕೊಳತೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಇದನ್ನು ಗ್ರಾಮದ ಜನ ಕಣ್ಣಾರೆ ನೋಡಿದ್ದಾರೆ. ಹೀಗಾಗಿ ಈ ಕೆರೆಯ ನೀರಿನ ಕುಡಿಯಲು ಒಪ್ಪುತ್ತಿಲ್ಲ. ಹೀಗಾಗಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಆಹಾಕಾರ ಎದ್ದಿದ್ದು, ಎರಡು ಕೊಡ ನೀರಿಗಾಗಿ ಇಡೀ ದಿನ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಕೆರೆಯಲ್ಲಿ ಮೃತದೇಹ ದೊರೆತ ಮಾರನೇ ದಿನವೇ ನೀರಿನ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆದರೆ ನೀರಿನಲ್ಲಿ ಯಾವುದೇ ಹಾನಿಕಾರಕ ಅಂಶ ಅಥವಾ ಕುಡಿಯಲು ಯೋಗ್ಯವಲ್ಲದ ಬ್ಯಾಕ್ಟಿರಿಯಾಗಳು ಇಲ್ಲ ಎಂದು ಪ್ರಯೋಗಾಲಯ ವರದಿ ಬಂದಿದ್ದರು ಕೂಡ, ಗ್ರಾಮಸ್ಥರು ಮಾತ್ರ ಈ ಕೆರೆಯ ನೀರನ್ನು ನಾವು ಬಳಸುವುದಿಲ್ಲ ಎಂದು ಕೆರೆಯನ್ನು ಖಾಲಿ ಮಾಡಿಸಿದ್ದಾರೆ.

ಉಮಚಗಿ ಗ್ರಾಮ ಅಷ್ಟೇ ಅಲ್ದೆ ಪಕ್ಕದ ರೊಟ್ಟಿಗವಾಡ ಗ್ರಾಮಸ್ಥರು ಇದೇ ಕೆರೆಯ ನೀರನ್ನು ಕುಡಿಯಲು ಬಳಸುತ್ತಿದ್ದರು. ಇತ್ತೀಚೆಗೆ ನಡೆದ ಘಟನೆಯಿಂದ ಎರಡೂ ಗ್ರಾಮದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಉಮಚಗಿ- ರೊಟ್ಟಿಗವಾಡ ಗ್ರಾಮದ ನಡುವೆ ಒಂದು ಸಣ್ಣ ಕೆರೆಯಿದ್ದು, ಈಗ ನೀರಿಗಾಗಿ ಇಡೀ ದಿನ ಬಡಿದಾಡುವಂತಾಗಿದೆ.

ಬೇಸಿಗೆ ಪರಿಣಾಮ ಅಲ್ಲಿಯೂ ನೀರು ಸಂಪೂರ್ಣ ಬತ್ತಿದ್ದು, ಗಂಟೆಗೆ ಎರಡು ಕೊಡ ನೀರು ದೊರೆಯುವುದೇ ದುಸ್ತರವಾಗಿರುವಾಗ ನೀರಿಗಾಗಿ ಇಡೀ ದಿನ ಕಾಯುವಂತಾಗಿದೆ. ಇನ್ನು ಸೈಕಲ್‌, ದ್ವಿಚಕ್ರ ಮೂಲಕ ಐದು ಕಿಮೀ ದೂರದ ನಲವಡಿ, ಆರು ಕಿಲೋಮೀಟರ್‌ ದೂರದ ಕೊಡ್ಲಿವಾಡಕ್ಕೆ ಹೋಗಿ ನೀರು ತರಬೇಕಿದೆ ಗ್ರಾಮಸ್ಥರ ಗೋಳಾಗಿದೆ.ಗ್ರಾಮಕ್ಕೆ ಪೂರೈಸುತ್ತಿದ್ದಂತೆ ತಾತ್ಕಾಲಿಕವಾಗಿ ಟ್ಯಾಂಕರ್‌ ನೀರು ನೀಡಬೇಕೆಂದು ಗ್ರಾಮಸ್ಥರ ಒತ್ತಾಯವಾಗಿದೆ.

Ashika S

Recent Posts

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಇನ್ನಿಲ್ಲ

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಅವರು 69ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.

5 mins ago

ರಜನಿಕಾಂತ್‌ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ

ಸೂಪರ್‌ಸ್ಟಾರ್ ರಜನಿಕಾಂತ್ 171ನೇ ಸಿನಿಮಾ 'ಕೂಲಿ' ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ…

9 mins ago

ಚಲಿಸುತ್ತಿದ್ದ ಬಸ್‌ನಿಂದ ಕಳಚಿಕೊಂಡ ಚಕ್ರಗಳು: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಸಾರಿಗೆ ಬಸ್‌ನ ಚಕ್ರ ಕಳಚಿಕೊಂಡು ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಬೆಚ್ಚಿಬಿದ್ದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ…

32 mins ago

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನ: ಆರೋಪಿ ವಶಕ್ಕೆ

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ…

56 mins ago

ಕುಕ್ಕೆ ದೇವಳಕ್ಕೆ ಯೇಸುರಾಜ್ ನೂತನ ಎಇಒ; ಶರಣ್ ಪಂಪ್ವೆಲ್ ಅಪಸ್ವರ, ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ಎ.30 ರಂದು ಅಧಿಕಾರ ಸ್ವೀಕರಿಸಿದರು. ರಾಮನಗರ…

60 mins ago

ಕಾಂಗ್ರೆಸ್ ನಾಯಕ ಎಂ.ಸಿ ವೇಣುಗೋಪಾಲ್ ಮನೆ ಮೇಲೆ ಐಟಿ ದಾಳಿ

ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ…

1 hour ago