ಹುಬ್ಬಳ್ಳಿ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ನಾಮಕರಣ ಬೇಡ ಎಂದು ಮೊದಲಿನಿಂದಲೂ ಯಡಿಯೂರಪ್ಪನವರು ಅದನ್ನೇ ಹೇಳುತ್ತಿದ್ದಾರೆ. ಆದರೆ ಶಿವಮೊಗ್ಗದ ಜನ ಒತ್ತಡ ತಂದಿದ್ದಾರೆ. ಈ ಕುರಿತು ಬಿಎಸ್ ವೈ ಜೊತೆ ಮಾತನಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಕುರಿತು ಚರ್ಚೆ ಮಾಡುತ್ತೇವೆ.
ಕಾಂಗ್ರೆಸ್ ದು ಟಿಪ್ಪು ಸುಲ್ತಾ ವಂಶಸ್ಥರ ಸಂಸ್ಕೃತಿ ನಮ್ಮದು ನಾಲ್ವಡಿ ಕೃಷ್ಣರಾಜರ ಸಂಸ್ಕೃತಿ ಎಂಬ ಸಿ.ಟಿ.ರವಿ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ಯಾರ್ಯಾರದ್ದು ಯಾವ ಸಂಸ್ಕೃತಿ ಎಂಬುದು ಜನರಿಗೆ ಗೊತ್ತಿದೆ. ನನ್ನ ಪ್ರಕಾರ ನಮ್ಮದು ನರೇಂದ್ರ ಮೋದಿ ಸಂಸ್ಕೃತಿ. ಭಾರತವನ್ನ ಅತ್ಯಂತ ಸಶಕ್ತವಾಗಿ ಶ್ರೀಮಂತವಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಅವರು ಅಮೃತ ಕಾಲವನ್ನ ಕರ್ತವ್ಯ ಕಾಲ ಎಂದು ಹೇಳಿದ್ದಾರೆ. ಕರ್ತವ್ಯದ ಮೂಲಕ ದೇಶವನ್ನ ಇಡೀ ಜಗತ್ತಿಗೆ ಸರ್ವ ಶ್ರೇಷ್ಠವನ್ನಾಗಿಸಲು ಹೊರಟಿದ್ದಾರೆ. ಆ ಧ್ಯೇಯ ಇಟ್ಟುಕೊಂಡು ನಾವು ಆಡಳಿತ ಮಾಡುತ್ತಿದ್ದೇವೆ ಎಂದರು.