News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ

ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ಕೋರ್ಟ್ ಗೆ ಹೋದ ವಿಚಾರ, ಜನರು ಸಧ್ಯ ಸಂಕಷ್ಟದಲ್ಲಿದ್ದಾರೆ ಅವರ ಕಷ್ಟವನ್ನು ನಿವಾರಣೆ ಮಾಡೊದು ರಾಜ್ಯ ಸರ್ಕಾರದ ಕರ್ತವ್ಯ. ಇವರು ನೈಜ ಸ್ಥಿತಿ, ಸಮಸ್ಯೆಗಳನ್ನು ಹೇಳಿಕೊಳ್ಳಲಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 
Photo Credit : News Kannada

ಹುಬ್ಬಳ್ಳಿ: ಸಿದ್ಧರಾಮಯ್ಯ ತಾವೇ ಸುಳ್ಳಿನ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಸಿದ್ಧರಾಮಯ್ಯ ಹೇಳಿರುವ ಸುಳ್ಳು ಒಂದೊಂದಾಗಿ ಹೊರಬರುತ್ತಿದೆ. ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವ ಭರವಸೆಗಳ ಕುರಿತು ವಿಧಾನಸಭೆ ಅಧಿವೇಶನದಲ್ಲಿಯೇ ಹೇಳಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಆದರ್ಶನಗರದ ಸಿಎಂ ನಿವಾಸದ ಎದುರು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇನ್ನೊಬ್ಬರ ಬಗ್ಗೆ ಸಾವಿರ ಬಾರಿ ಸುಳ್ಳು ಹೇಳಿದರೇ ಅದು ಸತ್ಯವಾಗುತ್ತದೆ ಎನ್ನುವ ಭ್ರಮೆಯಲ್ಲಿ ಸಿದ್ದರಾಮಯ್ಯನವರು ಇದ್ದಾರೆ. ಸತ್ಯ ಸತ್ಯವೇ, ಸುಳ್ಳು ಸುಳ್ಳೆ ಅವರು ಹೇಳಿದ ತಕ್ಷಣ ಸುಳ್ಳು ಸತ್ಯವಾಗಲ್ಲ, ಸತ್ಯ ಸುಳ್ಳಾಗಲ್ಲ. ಆದರೆ ಅತಿಯಾದ ಸುಳ್ಳು ಹೇಳಿದ ಮೇಲೆ ಸುಳ್ಳೇ ಸತ್ಯ ಅಂತ ಅವರಿಗೆ ನಂಬಿಕೆ ಬರಲಾರಂಭಿಸಿದೆ. ಎಂದರು.

ಮಠಾಧೀಶರನ್ನು ಚುನಾವಣಾ ಅಖಾಡಕ್ಕೆ ಇಳಿಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದುವರೆಗೂ ಯಾವುದೇ ಮಠಾಧೀಶರು ನನ್ನನ್ನು ಸಂಪರ್ಕಿಸಿಲ್ಲ, ಚರ್ಚಿಸಿಲ್ಲ. ಮಠಾಧೀಶರು ಚುನಾವಣೆಗೆ ಇಳಿಯುತ್ತಾರೆ ಎನ್ನುವ ಬಗ್ಗೆ ಏನೂ ಹೇಳಿಲು ಆಗಲ್ಲ ಎಂದು ಅವರು ಹೇಳಿದರು.

ಸಿದ್ಧರಾಮಯ್ಯ ಅರ್ಕಾವತಿ ಹಗರಣ ಸಿಬಿಐ ತನಿಖೆಗೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಬಿಐ ತನಿಖೆ ಬಗ್ಗೆ ಯಾರು ಹೇಳಿದ್ದು ಎಂದು ಪ್ರಶ್ನಿಸಿದ ಅವರು,ಅರ್ಕಾವತಿ ಹಗರಣದ ಬಗ್ಗೆ ಕಮೀಷನ್ ವರದಿ ಕೊಟ್ಟಿದೆ.

ಮುಂದೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ. ನಾವು ಸಂಪುಟದಲ್ಲಿ ಚರ್ಚಿಸಿ ಮುಂದಿನ ನಿರ್ಧಾನ ಕೈಗೊಳ್ಳುತ್ತೇವೆ ಎಂದು ಅವರು ಮಾಹಿತಿ ನೀಡಿದರು.

ಸೋನಿಯಾಗಾಂಧಿ ರಾಜಕೀಯ ನಿವೃತ್ತಿ ವಿಚಾರವಾಗಿ ಮಾತನಾಡಿದ ಅವರು, ಅದು ಅವರ ವೈಯಕ್ತಿಕ ಈ ಬಗ್ಗೆ ಮಾತನಾಡಲ್ಲ. 7ನೇ ವೇತನ ಆಯೋಗ ಜಾರಿಗಾಗಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಿಚಾರದ ಬಗ್ಗೆ ಮಾತನಾಡಿದ ಅವರು, ನಾನು ಈಗಾಗಲೇ ಅವರ ಜೊತೆ ಚರ್ಚಿಸಿದ್ದೇನೆ. ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದರು

ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ವಿಚಾರವಾಗಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಯನ್ನು ಅವರು ಮತ್ತಷ್ಟು ಬಲಪಡಿಸುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಬಸವರಾಜ ಬೊಮ್ಮಾಯಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು