ಹುಬ್ಬಳ್ಳಿ: ಸರ್ಕಾರಕ್ಕೆ ಆದಾಯ ತಂದು ಕೊಡುವ ಎರಡನೆಯ ಅತೀ ದೊಡ್ಡ ಉದ್ಯಮ ರಿಯಲ್ ಎಸ್ಟೇಟ್. ಈ ಉದ್ಯಮವನ್ನು ಸುಸಂಘಟಿತ ಹಾಗೂ ಕಾನೂನು ಬದ್ಧವಾಗಿ ನಡೆಸಿಕೊಂಡು ಬರುತ್ತಿರುವ ಕ್ರೆಡೈಗೆ ನೂತನ ರಾಜ್ಯಾಧ್ಯಕ್ಷರಾಗಿ ಹುಬ್ಬಳ್ಳಿಯ ಉದ್ಯಮಿ ಪ್ರದೀಪ ರಾಯ್ಕರ್ ಅವರು ಆಯ್ಕೆಯಾಗಿದ್ದು, ಅವರ ಅಧಿಕಾರ ಸ್ವೀಕಾರ ಸಮಾರಂಭ ಹುಬ್ಬಳ್ಳಿಯ ಡೆನ್ನಿಸನ್ಸ್ ಹೋಟೆಲ್ನಲ್ಲಿ ಜೂನ್ 10ರಂದು ಸಂಜೆ 6 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕ್ರೆಡೈ ನಿಕಟಪೂರ್ವ ರಾಜ್ಯಾಧ್ಯಕ್ಷ ಚೈತನ್ಯ ಕುಲಕರ್ಣಿ ಅವರು ನೂತನ ಅಧ್ಯಕ್ಷ ಪ್ರದೀಪ ರಾಯ್ಕರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡುವರು. ಇದೇ ವೇಳೆ ಹುಬ್ಬಳ್ಳಿ ಕ್ರೆಡೈ ಅಧ್ಯಕ್ಷರಾಗಿ ಆಯ್ಕೆಯಾದ ಸಂಜಯ ಕೊಠಾರಿ ಅವರೂ ಅಧಿಕಾರ ಸ್ವೀಕಾರ ಮಾಡುವರು. ಕ್ರೆಡೈನ ನಿಕಟಪೂರ್ವ ರಾಷ್ಟ್ರೀಯ ಅಧ್ಯಕ್ಷ ಇರ್ಫಾನ್ ರಜಾಕ್, ಸುನಿಲ್ ಮಂತ್ರಿ, ರಮಾಣಿ ಶಾಸ್ತ್ರಿ, ಶ್ರೀಧರನ್ ಸ್ವಾಮಿನಾಥನ್ ಸೇರಿದಂತೆ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಮಹತ್ತರ ಸಾಧನೆ ಮಾಡಿದವರು ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…
ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…
ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…
ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…
ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…
ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…