News Karnataka Kannada
Friday, May 10 2024
ಹುಬ್ಬಳ್ಳಿ-ಧಾರವಾಡ

ದೇಶದಲ್ಲೇ ಮೊದಲ ಯೋಜನೆ: ಹು-ಧಾ ನಗರಗಳ ಮಧ್ಯೆ ಸಂಚರಿಸಲಿದೆ ಲಘು ರೈಲು

light rail
Photo Credit : By Author

ಹುಬ್ಬಳ್ಳಿ: ರಾಜ್ಯ ರಾಜಧಾನಿ ಬೆಂಗಳೂರು ನಂತರ ರಾಜ್ಯದ ಎರಡನೇ ಅತಿ ಪ್ರಮುಖ ನಗರ ಹುಬ್ಬಳ್ಳಿ-ಧಾರವಾಡ ಮಹಾನಗರ. ಇಲ್ಲಿ ಟ್ರಾಫಿಕ್​ ಸಮಸ್ಯೆ ಕಡಿಮೆ ಮಾಡಲು ಈಗಾಗಲೆ ಬಿಆರ್​ಟಿಎಸ್ ಬಸ್​ಗಳು ಕಾರ್ಯನಿರ್ವಹಿಸುತ್ತಿವೆ. ಇದೀಗ ಬಿಆರ್​ಟಿಎಸ್​ ಬಸ್​ಗಳ ಜೊತೆಗೆ ಲಘು ರೈಲು ಸಾರಿಗೆಯನ್ನು ಪರಿಚಯಿಸಲು ಸರ್ಕಾರ ಮುಂದಾಗಿದೆ.

ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್​ ಲಾಡ್​ ಮಾತನಾಡಿ, ಲಘು ರೈಲು ಸಾರಿಗೆಯ ಆರಂಭಿಕ ಯೋಜನೆಗೆ ಕಾರ್ಯತಂತ್ರ ರೂಪಿಸಲಾಗಿದೆ. ಇನ್ನೂ ನಾಲ್ಕು ವಾರಗಳಲ್ಲಿ ಪ್ರಸ್ತಾವನೆ ಸಿದ್ದವಾಗಲಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳುವ ಪ್ರಸ್ತಾವನೆ ಇದೆ. ಎಲ್ಲವೂ ಅಂದುಕೊಂಡಂತೆ ನಡೆದರೇ ಒಂದೂವರೆ ವರ್ಷದಲ್ಲಿ ಈ ಯೋಜನೆ ಜಾರಿಗೆ ಬರಲಿದೆ ಎಂದರು.

ಲಘು ರೈಲು ಸಾರಿಗೆ ಜಾರಿಯಾದಾಗ ಬಿಆರ್‌ಟಿಎಸ್ ಅನ್ನು ನಿಲ್ಲಿಸುವುದಿಲ್ಲ. ಮುಂದಿನ 10 ವರ್ಷಗಳಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ವೇಗವಾಗಿ ಬೆಳೆಯಲಿದೆ. ಬೆಂಗಳೂರು ನಂತರ ಜನರು ವಾಸ್ತವ್ಯಕ್ಕೆ ಮತ್ತು ಕೈಗಾರಿಕೆಗಳಿಗೆ ಈ ನಗರವನ್ನು ಆಯ್ಕೆ ಮಾಡಿಕೊಳ್ಳುತ್ತವೆ. ಆದ್ದರಿಂದ ಮುಂದಿನ 10-20 ವರ್ಷಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವಳಿ ನಗರಗಳನ್ನು ಅಭಿವೃದ್ಧಿಪಡಿಸಲು ಯೋಚಿಸಬೇಕು. ಅದಕ್ಕೆ ಅನುಗುಣವಾಗಿ ಯೋಜನೆ ರೂಪಿಸಬೇಕು ಎಂಬ ವರದಿ ಸಹ ನೀಡಲಾಗಿದೆ ಎಂದು ತಿಳಿಸಿದರು.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು