ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಡಾ.ಕ್ರಾಂತಿಕಿರಣ ಮೆರವಣಿಗೆ ಮೂಲಕ ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಹುಬ್ಬಳ್ಳಿ ವೀರಾಪೂರ ಓಣಿಯಲ್ಲಿರುವ ಎರಡೆತ್ತಿನ ಮಠದಿಂದ ಆರಂಭಗೊಂಡ ಮೆರವಣಿಗೆ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಪ್ರಮುಖ ಆಯಕಟ್ಟಿನ ಪ್ರದೇಶಗಳಲ್ಲಿ ಸಂಚರಿಸುವ ಮೂಲಕ ಮಹತ್ವದ ಸಂದೇಶವನ್ನು ಸಾರಿದ್ದು, ಯಶಸ್ವಿ ಮೆರವಣಿಗೆ ಮಾಡಿದ್ದಾರೆ.
ಇನ್ನೂ ಡಾ.ಕ್ರಾಂತಿಕಿರಣ ಅವರಿಗೆ ಬಿಜೆಪಿ ನಾಯಕರು ಬೆಂಬಲ ಸೂಚಿಸಿದ್ದು, ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ಹಾಗೂ ಡಾ.ಕ್ರಾಂತಿಕಿರಣ ಬೆಂಬಲಿಗರು ಪುಷ್ಪ ಮಳೆ ಸುರಿಸಿ ಅಭಿಮಾನ ವ್ಯಕ್ತಪಡಿಸಿದರು. ಅಲ್ಲದೇ ಡಾ.ಕ್ರಾಂತಿಕಿರಣ ಅವರಿಗೆ ಬೆಂಬಲ ಸೂಚಿಸಿದ್ದು, ಗೆಲುವಿಗಾಗಿ ಶ್ರಮಿಸುವ ಭರವಸೆ ನೀಡಿದ್ದಾರೆ.