ಹೆಚ್ಚಿನ ಅಭಿವೃದ್ಧಿಗೆ ಒಂದು ಅವಕಾಶ ಕೊಡಿ- ಪೂರ್ವ ಕ್ಷೇತ್ರದ ಜನತೆಗೆ ದುರ್ಗಪ್ಪ ಬಿಜವಾಡ ಮನವಿ

ಹುಬ್ಬಳ್ಳಿ: ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಇರುವ ಹಿನ್ನಲೆಯಲ್ಲಿ, ಆಲ್ ಇಂಡಿಯಾ ಎಐಎಮ್ಐಎಮ್ ಪಕ್ಷದ ಅಭ್ಯರ್ಥಿ ದುರ್ಗಪ್ಪ ಬಿಜವಾಡ ಅವರು, ಹಿಂದೂ, ಮುಸ್ಲಿಂ ಬಾಂಧವರ ಜೊತೆ ಪ್ರಚಾರ ಸಭೆ ಮಾಡುತ್ತಿದ್ದಾರೆ. ಪೂರ್ವ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಆಗಬೇಕೆಂದರೆ, ನಿಮ್ಮ ಕಷ್ಟಕ್ಕೆ ಸೂಕ್ತ ಪರಿಹಾರ ಸಿಗಬೇಕೆಂದರೆ ಈ ಬಾರಿ ಎಐಎಮ್ಐಎಮ್  ಪಕ್ಷಕ್ಕೆ ಮತ ಒಂದು ಅವಕಾಶ ಮಾಡಿಕೊಡಿ ಎಂದು ಕ್ಷೇತ್ರದ ಜನರಲ್ಲಿ ಮನವರಿಕೆ ಮಾಡುತ್ತಿದ್ದಾರೆ.

ಇನ್ನು ನಿನ್ನೆ ರಾತ್ರಿ ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದಲ್ಲಿ ಬರುವಂತಹ ಬಿರಬಂದ ಗಲ್ಲಿ, ಧಾರವಾಡ ಪ್ಲಾಟ್, ಇಬ್ರಾಹಿಮಪುರ, ಬೆಪಾರಿ ಪ್ಲಾಟ್, ಕ್ಯಾಥೋಲಿಕ್ ಚರ್ಚ್ ಮಂಟೂರ ರೋಡ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಅಬ್ಬರದ ಪ್ರಚಾರ ಮತ್ತು ಪ್ರಚಾರ ಸಭೆಯನ್ನು ಹಮ್ಮಿಕೊಂಡು ಜನರಲ್ಲಿ ತಮ್ಮ ಮುಂದಿನ ಪೂರ್ವ ಕ್ಷೇತ್ರದ ಚಿತ್ರಣವನ್ನು ಬಿಚ್ವಿಟ್ಟರು, ಅಷ್ಟೇ ಅಲ್ದೆ ದುರ್ಗಪ್ಪ ಬಿಜವಾಡ ಅವರು ಹೋಗುತ್ತಿದ್ದಂತೆ ಜನರು ಕೂಡ ಆತ್ಮೀಯವಾಗಿ ಸ್ವಾಗತ ಮಾಡಿಕೊಂಡು, ಒಳ್ಳೆ ರೀತಿಯ ಸ್ಪಂದನೆ ಕೂಡ ನೀಡುತ್ತಿದ್ದಾರೆ.

ದುರ್ಗಪ್ಪ ಬಿಜವಾಡ ಅವರ ಪರವಾಗಿ ಮುಸ್ಲಿಂ ಬಾಂಧವರೇ ಪೂರ್ವ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಇನ್ನು ಎಮ್ಐಎಮ್ ಪಕ್ಷದ ಕಾರ್ಯಕರ್ತರು ಕೂಡ ದುರ್ಗಪ್ಪ ಬಿಜವಾಡ ಅವರಿಗೆ ಸಾಥ್ ನೀಡುತ್ತಿದ್ದಾರೆ.

Gayathri SG

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

12 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

22 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

30 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

32 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

44 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

53 mins ago