News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ ಎಚ್. ಕೆ. ಪಾಟೀಲ್

Hubballi: H D Deve Gowda has levelled serious allegations against the BJP. K. Patil
Photo Credit : News Kannada

ಹುಬ್ಬಳ್ಳಿ: ಮಹದಾಯಿ ಯೋಜನೆ ವಿಚಾರದಲ್ಲಿ ಸತತವಾಗಿ ಕಾಂಗ್ರೆಸ್ ಹೋರಾಟ ಮಾಡುತ್ತಲೇ, ಎಚ್ಚರಿಕೆ ನೀಡುತ್ತಲೇ ಬಂದಾಗ, ಭಾರತೀಯ ಜನತಾ ಪಕ್ಷದ ನಾಯಕರು ರಾಜಕೀಯವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಏನು ಮಾಡಬೇಕಾಗಿತ್ತು ಅವರು ಮಾಡಲಿಲ್ಲ. ಕೇವಲ ಸುಳ್ಳು ಹೇಳುವುದಲ್ಲಿಯೇ ಕಾಲಹರಣ ಮಾಡಿದರೆಂದು ಮಾಜಿ ಜಲಸಂಪನ್ಮೂಲ ಸಚಿವ ಎಚ್. ಕೆ. ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.

ನಗರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಮಹದಾಯಿ ಯೋಜನೆ ಜಾರಿ ವಿಚಾರದಲ್ಲಿ ಜನಾಂದೋಲನವಾಗಿ ಹೋರಾಟ ಮಾಡಿ, ಅನೇಕ ಪ್ರಶ್ನೆಗಳನ್ನು ಹಾಕಿದೆವು. ಆದರೆ ಯಾವುದೇ ಉತ್ತರ ಅವರಿಂದ ಬರಲೇ ಇಲ್ಲ. ಇನ್ನು ಈ ವಿಚಾರದಲ್ಲಿ ಸದನದಲ್ಲಿ ಒಂದು ಮಹದಾಯಿ ಯೋಜನೆ ಜಾರಿಯಲ್ಲಿ ಡಿಪಿಆರ್ ಗೆ ಅನುಮತಿ ಸಿಕ್ಕಿದೆ ಎಂದು ಸುಳ್ಳು ಆದೇಶ ಪ್ರತಿ ಹೊರಡಿಸಿ ಅದನ್ನು ಸಮರ್ಥಿಸುವ ಕೆಲಸಕ್ಕೆ ಮುಂದಾದರು. ಇದನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸಿ ಹೋರಾಟಕ್ಕೆ ಸಹ ಮುಂದಾಯಿತು.

ಅರಣ್ಯ ಇಲಾಖೆಯಿಂದ ಮಹದಾಯಿ ಹಾಗೂ ಬಂಡೂರಿಗೆ ಇನ್ನು ಅನುಮತಿ ಸಿಕ್ಕಿಲ್ಲ ಅಂತಾ ಹೇಳಿದರೂ ಕೂಡ ಅದಕ್ಕೆ ಕ್ಯಾರೇ ಅನ್ನದೇ ಭಾರತೀಯ ಜನತಾ ಪಕ್ಷದ ನಾಯಕರು ಹಾಗೂ ಸಚಿವರು ಕೇವಲ ಸುಳ್ಳು ಡಿಪಿಆರ್ ಅನುಮತಿ ಪತ್ರ ಬಹಿರಂಗವಾಗಿ ತೋರಿಸಿ ದೊಡ್ಡ ಮಟ್ಟದ ವಿಜಯೋತ್ಸವ ಸಹ ಮಾಡಿದರು.

ಆದರೆ ಅವರಿಗೆ ಈ ಬಗ್ಗೆ ಯಾವುದೇ ರೀತಿಯ ಗಂಭೀರತೆ ಇಲ್ಲ . ಅರಣ್ಯ ಇಲಾಖೆಯ ಭೂಮಿಯಲ್ಲಿನ ಯೋಜನೆ ಎಲ್ಲವೂ ಕ್ಲಿಯರ್ ಮಾಡಿ ಕೊಡಲು ಒತ್ತಾಯವನ್ನು ಬಿಜೆಪಿ ಮಾಡಲಿಲ್ಲ. ಕೇವಲ ತಮಗೆ ಬೇಕಾಬಿಟ್ಟಿಯಾಗಿ ನಡೆದುಕೊಂಡರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು