ಹುಬ್ಬಳ್ಳಿ: ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಮಧ್ಯದಲ್ಲಿಯೇ ಉರುಳಿ ಬಿದ್ದು ಚಾಲಕ ಹಾಗೂ ಕ್ಲೀನರ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ನಗರದ ಬೈರಿದೇವರಕೊಪ್ಪದ ದರ್ಗಾ ಬಳಿ ನಡೆದಿದೆ.
ನಿಗದಿತ ಪ್ರಮಾಣಕ್ಕಿಂತ ಅಧಿಕ ಪ್ರಮಾಣದ ಸರಕು ಸಾಗಾಟ ಮಾಡುತ್ತಿದ್ದ ಹಿನ್ನಲೆ ಈ ಘಟನೆ ಸಂಭವಿಸಿದೆ. ಹುಬ್ಬಳ್ಳಿಯ ಎಪಿಎಂಸಿಯಿಂದ ಬ್ಯಾಡಗಿಗೆ ಒಣ ಮೆಣಸಿನಕಾಯಿ ಸಾಗಾಟ ಮಾಡುತ್ತಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ನಡು ರಸ್ತೆಯಲ್ಲಿಯೇ ಉರುಳಿ ಬಿದ್ದು ಚಾಲಕ ಹಾಗೂ ಕ್ಲೀನರ್ ವಾಹನದಲ್ಲಿ ಸಿಲುಕಿದ್ದರು.
ಕೂಡಲೇ ಕೆಲವು ವಾಹನದ ಸವಾರರು ಗೂಡ್ಸ್ ವಾಹನದಲ್ಲಿ ಸಿಲುಕಿದ್ದ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಇನ್ನು, ರಸ್ತೆಯ ಮಧ್ಯದಲ್ಲಿಯೇ ವಾಹನ ಉರುಳಿ ಬಿದ್ದ ಕಾರಣ ಬೇರೆ ವಾಹನಗಳ ಓಡಾಟಕ್ಕೆ ತೊಂದರೆ ಕೂಡಾ ಉಂಟಾಗಿತ್ತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ರಸ್ತೆಯ ಮಧ್ಯದಲ್ಲಿಯೇ ಬಿದ್ದ ಗೂಡ್ಸ್ ವಾಹನವನ್ನು ತೆರವುಗೊಳಿಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.