ಹುಬ್ಬಳ್ಳಿ: ಹಾಡಹಗಲೇ ಕಾಲೇಜು ಕ್ಯಾಂಪಸ್ನಲ್ಲಿ ಕಾರ್ಪೋರೇಟರ್ ಮಗಳು ನೇಹಾ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎನ್ಕೌಂಟರ್ ಮಾಡುವಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಕಾಲೇಜಿನಲ್ಲಿ ಯುವತಿ ನೇಹಾ ಕೊಲೆಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಎಲ್ಲ ವಿದ್ಯಾನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದಾರೆ. ವಿದ್ಯಾರ್ಥಿನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಯನ್ನು ಅನ್ಕೌಂಟರ್ ಮಾಡಿ. ಇಲ್ಲದಿದ್ದರೇ ಅವನನ್ನು ನಮಗೆ ಒಪ್ಪಿಸಿ ಎಂದು ಕಾರ್ಯಕರ್ತರು ಪೊಲೀಸರಿಗೆ ಒತ್ತಾಯ ಮಾಡಿದ್ದಾರೆ. ಪೊಲೀಸ್ ಠಾಣೆ ಮುಂದೆ ನೂರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದರಿಂದ ಗದ್ದಲವಾಗಿ ಡಿಸಿಪಿ ರಾಜೀವ್ ಮತ್ತು ಹಿಂದೂ ಪರ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಿಕಮಕಿ ನಡೆಯಿತು.