News Karnataka Kannada
Saturday, May 11 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಕೆಜೆಪಿ ಕಟ್ಟಿ ದೊಡ್ಡ ಅಪರಾಧ ಮಾಡಿದ್ದೆ, ಶೆಟ್ಟರ್ ಹಾಗೆ ಕಾಂಗ್ರೆಸ್‌ ಸೇರಿದ್ದಲ್ಲ

I committed a big crime by building KJP, shettar didn't get into his hands like that.
Photo Credit : News Kannada

ಹುಬ್ಬಳ್ಳಿ: ನಾನು ಕೆಜೆಪಿ ಕಟ್ಟಿ ದೊಡ್ಡ ಅಪರಾಧ ಮಾಡಿದ್ದೆ. ಈ ಬಗ್ಗೆ ರಾಜ್ಯದ ಜನತೆ ಹತ್ತಿರ ಕ್ಷಮೆ ಸಹ ಕೇಳಿದ್ದೇನೆ. ನಾನು ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದ್ದೆ. ಆದರೆ ಶೆಟ್ಟರ್ ತರಹ ಕಾಂಗ್ರೆಸ್ ಸೇರಿರಲಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.

ನಗರದ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಸೋಲಿಸುವಲ್ಲಿ ನಾವು ಯಶಸ್ವಿಯಾಗುತ್ತವೆ. ವಿಶ್ವಾಸ ದ್ರೋಹ ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ಜಗದೀಶ್ ಶೆಟ್ಟರ್ ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಶೆಟ್ಟರ್ ವಾಪಸ್ಸು ಬಿಜೆಪಿಗೆ ಬರುವ ಪ್ರಶ್ನೆಯೇ ಇಲ್ಲ ಎಂದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ನೂರಕ್ಕೆ ನೂರು ಶತಸಿದ್ಧ.ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ. ಚುನಾವಣಾ ಕೊನೆಯ ದಿನದವರಿಗೂ ರಾಜ್ಯ ಉದ್ದಗಲಕ್ಕೂ ಸಂಚಾರಿ ಮಾಡಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಎಂದರು.

ಬಿಜೆಪಿಗೆ ಮುಸ್ಲಿಂ ಮತಗಳು ಬೇಡ ಎಂಬ ಈಶ್ವರಪ್ಪ ಹೇಳಿಕೆ ಪ್ರತಿಕ್ರಿಯಿಸಿ, ಅದು ಅವರ ವೈಯಕ್ತಿಕ ಅಭಿಪ್ರಾಯ  ಅದು ಪಕ್ಷದ ನಿರ್ಧಾರವಲ್ಲ. ಬಿಜೆಪಿಗೆ ಎಲ್ಲ ಸಮುದಾಯಗಳ ಬೆಂಬಲವಿದೆ. ಸಿಟಿ ರವಿ ಸಿಎಂ ಆಗಬಹುದು ಎಂಬ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಣೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು